ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ. ಇದೆಲ್ಲ ಸುಳ್ಳು ಆರೋಪವಾಗಿದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಮಗೂ ನೀರಿನ ವಿಚಾರದಲ್ಲಿ ಜವಾಬ್ದಾರಿ ಇದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಸುದ್ದಿಗಾರರೊಂದಿಗೆ ಮಾತ ಕೇಳಿದಾಗ, “ತಮಿಳುನಾಡಿಗೆ ನೀರು ಬಿಟ್ಟಿರುವ ಆರೋಪ ಸುಳ್ಳು ಎಂದಿದ್ದಾರೆ.
ತಮಿಳುನಾಡಿಗೆ ಈ ಸಂದರ್ಭದಲ್ಲಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಡುವುದೂ ಇಲ್ಲ. ತಮಿಳುನಾಡಿಗೆ ಹೋಗುವ ಪ್ರತಿಯೊಂದು ನೀರಿನ ಲೆಕ್ಕ ದಾಖಲಾಗಿರುತ್ತದೆ.
ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಾವು ನೀರಿನ ವಿಚಾರದಲ್ಲಿ ಜವಾಬ್ದಾರಿ ಹೊಂದಿದ್ದೇವೆ. ಕಾವೇರಿ ಭಾಗದ ರೈತರನ್ನು ನಾವು ಈ ಹಿಂದೆಯೂ ಕಾಪಾಡಿದಿದ್ದೇವೆ. ಈಗಲೂ ಕಾಪಾಡುತ್ತಿದ್ದೇವೆ.
ತಮಿಳುನಾಡು ನೀರು ಕೇಳುತ್ತಿಲ್ಲದಿರುವಾಗ ನಾವು ಯಾಕೆ ಅವರಿಗೆ ನೀರನ್ನು ಬಿಡೋಣ? ಕುಡಿಯುವ ನೀರಿನ ಪೂರೈಕೆ ನಮ್ಮ ಸರ್ಕಾರದ ಮೊದಲ ಆದ್ಯತೆ.
ಶಿವ ಡ್ಯಾಂ ನಲ್ಲಿ ನೀರಿನ ಮಟ್ಟ 2 ಅಡಿ ಕಡಿಮೆ ಇದ್ದ ಕಾರಣ ಬೆಂಗಳೂರಿಗೆ ಪೂರೈಸಲು ನೀರನ್ನು ಪಂಪ್ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಈ ಕೊರತೆಯನ್ನು ತುಂಬಲು ಬಿಡಬ್ಲ್ಯೂಎಸ್ಎಸ್ ಬಿ ಮನವಿ ಮೇರೆಗೆ ಕೆಆರ್ ಎಸ್ ನಿಂದ ನೀರು ಹರಿಸಿದ್ದೇವೆಯೇ ಹೊರತು, ತಮಿಳುನಾಡಿಗೆ ನೀರು ಹರಿಸಿಲ್ಲ ಎಂದರು
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…