ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ. ಇದೆಲ್ಲ ಸುಳ್ಳು ಆರೋಪವಾಗಿದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಮಗೂ ನೀರಿನ ವಿಚಾರದಲ್ಲಿ ಜವಾಬ್ದಾರಿ ಇದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಸುದ್ದಿಗಾರರೊಂದಿಗೆ ಮಾತ ಕೇಳಿದಾಗ, “ತಮಿಳುನಾಡಿಗೆ ನೀರು ಬಿಟ್ಟಿರುವ ಆರೋಪ ಸುಳ್ಳು ಎಂದಿದ್ದಾರೆ.
ತಮಿಳುನಾಡಿಗೆ ಈ ಸಂದರ್ಭದಲ್ಲಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಡುವುದೂ ಇಲ್ಲ. ತಮಿಳುನಾಡಿಗೆ ಹೋಗುವ ಪ್ರತಿಯೊಂದು ನೀರಿನ ಲೆಕ್ಕ ದಾಖಲಾಗಿರುತ್ತದೆ.
ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಾವು ನೀರಿನ ವಿಚಾರದಲ್ಲಿ ಜವಾಬ್ದಾರಿ ಹೊಂದಿದ್ದೇವೆ. ಕಾವೇರಿ ಭಾಗದ ರೈತರನ್ನು ನಾವು ಈ ಹಿಂದೆಯೂ ಕಾಪಾಡಿದಿದ್ದೇವೆ. ಈಗಲೂ ಕಾಪಾಡುತ್ತಿದ್ದೇವೆ.
ತಮಿಳುನಾಡು ನೀರು ಕೇಳುತ್ತಿಲ್ಲದಿರುವಾಗ ನಾವು ಯಾಕೆ ಅವರಿಗೆ ನೀರನ್ನು ಬಿಡೋಣ? ಕುಡಿಯುವ ನೀರಿನ ಪೂರೈಕೆ ನಮ್ಮ ಸರ್ಕಾರದ ಮೊದಲ ಆದ್ಯತೆ.
ಶಿವ ಡ್ಯಾಂ ನಲ್ಲಿ ನೀರಿನ ಮಟ್ಟ 2 ಅಡಿ ಕಡಿಮೆ ಇದ್ದ ಕಾರಣ ಬೆಂಗಳೂರಿಗೆ ಪೂರೈಸಲು ನೀರನ್ನು ಪಂಪ್ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಈ ಕೊರತೆಯನ್ನು ತುಂಬಲು ಬಿಡಬ್ಲ್ಯೂಎಸ್ಎಸ್ ಬಿ ಮನವಿ ಮೇರೆಗೆ ಕೆಆರ್ ಎಸ್ ನಿಂದ ನೀರು ಹರಿಸಿದ್ದೇವೆಯೇ ಹೊರತು, ತಮಿಳುನಾಡಿಗೆ ನೀರು ಹರಿಸಿಲ್ಲ ಎಂದರು
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…