Vijayendra
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದ ವೇಳೆ ನಾವು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ತೀರ್ಮಾನಿಸಿಲ್ಲ. ಬದಲಿಗೆ ಕಾಂಗ್ರೆಸ್ ಸರ್ಕಾರದ ವೈಫಲ್ಯದ ಬಗ್ಗೆ ಸದನದಲ್ಲಿ ಗಮನಸೆಳೆಯಲು ನಿರ್ದೇಶಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಎರಡೂವರೆ ವರ್ಷಗಳ ಸರ್ಕಾರದ ಆಡಳಿತ ವೈಖರಿಯಿಂದ ಸ್ವಪಕ್ಷದ ಶಾಸಕರೇ ಬೇಸತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅಚ್ಚರಿಯಿಲ್ಲ ಎಂದು ಹೇಳಿದರು.
ಸರ್ಕಾರದಲ್ಲಿ ಶೇ.63ರಷ್ಟು ಭ್ರಷ್ಟಾಚಾರ ಬಗ್ಗೆ ಉಪಲೋಕಾಯುಕ್ತರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡುವ ಕೆಲಸ ಮಾಡಿದ್ದಾರೆ. ಉಪಲೋಕಾಯುಕ್ತರು ಏನು ಹೇಳಿದ್ದಾರೆ ಅದರ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ ಎಂದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ನವರು ಶೇ.40 ಕಮೀಷನ್ ಆರೋಪ ಮಾಡಿದ್ದರು. ತನಿಖಾ ಸಂಸ್ಥೆ ರಚನೆ ಮಾಡಿದರು. ಆದರೆ ಆರೋಪ ಸಾಬೀತಾಗಲಿಲ್ಲ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಬಗ್ಗೆ ನಿಮದೇ ಶಾಸಕರು ನಂಬರ್ ಒನ್ ಎಂದು ಹೇಳಿದ್ದಾರೆಂದು ವಾಗ್ದಾಳಿ ನಡೆಸಿದರು.
ವಾಲ್ಮೀಕಿ ಹಗರಣ ಬಗ್ಗೆ ಸದನದಲ್ಲಿ ಸ್ವತಃ ಸಿಎಂ ಅವರೇ ಒಪ್ಪಿಕೊಂಡಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ಎಂದು ಯಾವ ಬಾಯಿಂದ ಹೇಳುತ್ತಾರೆ ಎಂದು ಪ್ರಶ್ನೆ ಮಾಡಿದರು.
ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ತಯಾರಿ ಮಾಡಿಕೊಂಡಿದ್ದೇವೆ. ಮೈತ್ರಿ ಪಕ್ಷರ ಸದಸ್ಯರ ಜೊತೆ ಒಟ್ಟಿಗೆ ಕೂತು ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರದ ವೈಫಲ್ಯ, ಜ್ವಲಂತ ಸಮಸ್ಯೆಗಳ ಬಗ್ಗೆ ಸದನದ ಗಮನ ಸೆಳೆಯಲು ನಿರ್ಧರಿಸಿದ್ದೇವೆ. ಪ್ರತಿ ಬಾರಿ ಅಲ್ಲಿ ಸದನ ನೆಡೆದಾಗಲೂ ಆ ಭಾಗದ ವಿಚಾರಗಳು ಚರ್ಚೆಗೊಳಪಡುತ್ತವೆ ಆದರೆ ಅದು ನಾಮಕೆವಸ್ತೇ ಎನ್ನುವಂತಿರುತ್ತದೆ. ಹೀಗಾಗಿ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಈ ಬಾರಿ ಸದನವನ್ನು ಬಳಸಿಕೊಳ್ಳಬೇಕಿದೆ ಎಂದರು.
ಸದನದ ಆರಂಭದಲ್ಲೇ ಈ ವಿಚಾರಗಳ ಚರ್ಚೆ ಮಾಡಲು ನಿರ್ಧರಿಸಿದ್ದೇವೆ. ಮೆಕ್ಕೆಜೋಳ, ತೊಗರಿ,ಕಬ್ಬು, ಭತ್ತ ಖರೀದಿ, ತುಂಗಭದ್ರಾ ಜಲಾಶಯಕ್ಕೆ ಕ್ರಸ್ಟ್ ಗೇಟ್ ಅಳವಡಿಕೆ ಹೀಗೆ ಎಲ್ಲ ವಿಚಾರಗಳ ಕುರಿತು ಸರ್ಕಾರದ ನಿಲುವನ್ನ ಪ್ರಶ್ನಿಸಲಿದ್ದೇವೆ ಎಂದು ಹೇಳಿದರು.
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…