ರಾಜ್ಯ

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದ ವೇಳೆ ನಾವು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ತೀರ್ಮಾನಿಸಿಲ್ಲ. ಬದಲಿಗೆ ಕಾಂಗ್ರೆಸ್ ಸರ್ಕಾರದ ವೈಫಲ್ಯದ ಬಗ್ಗೆ ಸದನದಲ್ಲಿ ಗಮನಸೆಳೆಯಲು ನಿರ್ದೇಶಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಎರಡೂವರೆ ವರ್ಷಗಳ ಸರ್ಕಾರದ ಆಡಳಿತ ವೈಖರಿಯಿಂದ ಸ್ವಪಕ್ಷದ ಶಾಸಕರೇ ಬೇಸತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅಚ್ಚರಿಯಿಲ್ಲ ಎಂದು ಹೇಳಿದರು.

ಸರ್ಕಾರದಲ್ಲಿ ಶೇ.63ರಷ್ಟು ಭ್ರಷ್ಟಾಚಾರ ಬಗ್ಗೆ ಉಪಲೋಕಾಯುಕ್ತರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡುವ ಕೆಲಸ ಮಾಡಿದ್ದಾರೆ. ಉಪಲೋಕಾಯುಕ್ತರು ಏನು ಹೇಳಿದ್ದಾರೆ ಅದರ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ ಎಂದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‍ನವರು ಶೇ.40 ಕಮೀಷನ್ ಆರೋಪ ಮಾಡಿದ್ದರು. ತನಿಖಾ ಸಂಸ್ಥೆ ರಚನೆ ಮಾಡಿದರು. ಆದರೆ ಆರೋಪ ಸಾಬೀತಾಗಲಿಲ್ಲ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಬಗ್ಗೆ ನಿಮದೇ ಶಾಸಕರು ನಂಬರ್ ಒನ್ ಎಂದು ಹೇಳಿದ್ದಾರೆಂದು ವಾಗ್ದಾಳಿ ನಡೆಸಿದರು.

ವಾಲ್ಮೀಕಿ ಹಗರಣ ಬಗ್ಗೆ ಸದನದಲ್ಲಿ ಸ್ವತಃ ಸಿಎಂ ಅವರೇ ಒಪ್ಪಿಕೊಂಡಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ಎಂದು ಯಾವ ಬಾಯಿಂದ ಹೇಳುತ್ತಾರೆ ಎಂದು ಪ್ರಶ್ನೆ ಮಾಡಿದರು.

ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ತಯಾರಿ ಮಾಡಿಕೊಂಡಿದ್ದೇವೆ. ಮೈತ್ರಿ ಪಕ್ಷರ ಸದಸ್ಯರ ಜೊತೆ ಒಟ್ಟಿಗೆ ಕೂತು ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರದ ವೈಫಲ್ಯ, ಜ್ವಲಂತ ಸಮಸ್ಯೆಗಳ ಬಗ್ಗೆ ಸದನದ ಗಮನ ಸೆಳೆಯಲು ನಿರ್ಧರಿಸಿದ್ದೇವೆ. ಪ್ರತಿ ಬಾರಿ ಅಲ್ಲಿ ಸದನ ನೆಡೆದಾಗಲೂ ಆ ಭಾಗದ ವಿಚಾರಗಳು ಚರ್ಚೆಗೊಳಪಡುತ್ತವೆ ಆದರೆ ಅದು ನಾಮಕೆವಸ್ತೇ ಎನ್ನುವಂತಿರುತ್ತದೆ. ಹೀಗಾಗಿ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಈ ಬಾರಿ ಸದನವನ್ನು ಬಳಸಿಕೊಳ್ಳಬೇಕಿದೆ ಎಂದರು.

ಸದನದ ಆರಂಭದಲ್ಲೇ ಈ ವಿಚಾರಗಳ ಚರ್ಚೆ ಮಾಡಲು ನಿರ್ಧರಿಸಿದ್ದೇವೆ. ಮೆಕ್ಕೆಜೋಳ, ತೊಗರಿ,ಕಬ್ಬು, ಭತ್ತ ಖರೀದಿ, ತುಂಗಭದ್ರಾ ಜಲಾಶಯಕ್ಕೆ ಕ್ರಸ್ಟ್ ಗೇಟ್ ಅಳವಡಿಕೆ ಹೀಗೆ ಎಲ್ಲ ವಿಚಾರಗಳ ಕುರಿತು ಸರ್ಕಾರದ ನಿಲುವನ್ನ ಪ್ರಶ್ನಿಸಲಿದ್ದೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

17 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

17 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

17 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

17 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

17 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

17 hours ago