ರಾಜ್ಯ

ಎಚ್‌ಡಿಕೆ ಬಿಜೆಪಿ ಅಧ್ಯಕ್ಷರಾದರು ಅಚ್ಚರಿಯಿಲ್ಲ: ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು : ಜೆಡಿಎಸ್​​ ಎನ್​ಡಿಎ ಜೊತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಇತ್ತ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್​ ಆಗುತ್ತಿದ್ದಾರೆ. ಇದೀಗ ಕಾಂಗ್ರೆಸ್ ಸಹ ಕುಮಾರಸ್ವಾಮಿ ಕಾಲೆಳೆದಿದ್ದು, ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಎಚ್​ಡಿ ಕುಮಾರಸ್ವಾಮಿಯವರು ಕೋಮುವಾದದ ಕಡೆ ಹೋಗುತ್ತಿರುವ ವೇಗ ನೋಡಿದರೆ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿಯಾಗಬೇಕಿಲ್ಲ ಎಂದು​ ಲೇವಡಿ ಮಾಡಿದೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಕುಮಾರಸ್ವಾಮಿಯವರು ಬಿಜೆಪಿಯವರಿಗಿಂತ ಹೆಚ್ಚು ಆರ್​ಎಸ್​ಎಸ್​ ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ. ಅವರು ಕೋಮುವಾದ ಕಡೆಗೆ ಹೋಗುತ್ತಿರುವ ವೇಗ ನೋಡಿದರೆ ಕಲವೇ ದಿನಗಳಲ್ಲಿ ಬಿಜೆಪಿಗಳನ್ನೇ ಓವರ್​ ಟೇಕ್​ ಮಾಡಿ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿ ಇಲ್ಲ ಎಂದು ಕುಮಾರಸ್ವಾಮಿ ಅವರ ಕಾಲೆಳೆದಿದೆ.

ಬಿಜೆಪಿಯವರ ಒಳಜಗಳ ಕುಮಾರಸ್ವಾಮಿಯವರಿಗೆ ವರದಾನವಾಗಲಿದೆ ಎಂದಿರುವ ಕಾಂಗ್ರೆಸ್, ಬಿಜೆಪಿ ಹೈಕಮಾಂಡ್​ ಕುಮಾರಸ್ವಾಮಿಯವರನ್ನು ರಾಜ್ಯ ಬಿಜೆಪಿಗೆ ಪ್ರತಿಷ್ಠಾಪಿಸಿದರೂ ಅತಿಶಯೋಕ್ತಿ ಇಲ್ಲ. ಅಲ್ಲದೇ ಎಚ್ಚರದಿಂದಿರಿ ಎಂದು ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಟ್ಯಾಗ್‌ ಮಾಡಿ ಹೇಳಿದೆ.

ಮೊನ್ನೇ ಅಷ್ಟೇ ಕುಮಾರಸ್ವಾಮಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಆರ್​ಎಸ್​ಎಸ್​ ಪ್ರಭಾಕರ್ ಭಟ್ ಅವರ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತಿರುವ ಪ್ರಭಾಕರ್ ಭಟ್ಟರ ಬಗ್ಗೆ ತಪ್ಪು ಮಾಹಿತಿ ನೀಡಿದ್ದರು. ಹಾಗಾಗಿ ಈ ಹಿಂದೆ ಅವರನ್ನು ಏನೇನೋ ಟೀಕಿಸಿದ್ದೇನೆ. ಈಗ ನನ್ನಲ್ಲಿ ಪರಿವರ್ತನೆ ಆಗಿದೆ ಎಂದು ಪ್ರಭಾಕರ್ ಭಟ್​ ಅವರನ್ನು ಗುಣಗಾನ ಮಾಡಿದ್ದರು.

ಈ ಗುಣಗಾನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದ್ದು, ಎಚ್‌ಡಿಕೆ ಟ್ರೋಲ್‌ಗೆ ಗುರಿಯಾಗಿದ್ದಾರೆ.

andolanait

Recent Posts

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

1 hour ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

1 hour ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

1 hour ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

2 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

3 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

4 hours ago