ರಾಜ್ಯ

ಎಚ್‌ಡಿಕೆ ಬಿಜೆಪಿ ಅಧ್ಯಕ್ಷರಾದರು ಅಚ್ಚರಿಯಿಲ್ಲ: ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು : ಜೆಡಿಎಸ್​​ ಎನ್​ಡಿಎ ಜೊತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಇತ್ತ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್​ ಆಗುತ್ತಿದ್ದಾರೆ. ಇದೀಗ ಕಾಂಗ್ರೆಸ್ ಸಹ ಕುಮಾರಸ್ವಾಮಿ ಕಾಲೆಳೆದಿದ್ದು, ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಎಚ್​ಡಿ ಕುಮಾರಸ್ವಾಮಿಯವರು ಕೋಮುವಾದದ ಕಡೆ ಹೋಗುತ್ತಿರುವ ವೇಗ ನೋಡಿದರೆ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿಯಾಗಬೇಕಿಲ್ಲ ಎಂದು​ ಲೇವಡಿ ಮಾಡಿದೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಕುಮಾರಸ್ವಾಮಿಯವರು ಬಿಜೆಪಿಯವರಿಗಿಂತ ಹೆಚ್ಚು ಆರ್​ಎಸ್​ಎಸ್​ ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ. ಅವರು ಕೋಮುವಾದ ಕಡೆಗೆ ಹೋಗುತ್ತಿರುವ ವೇಗ ನೋಡಿದರೆ ಕಲವೇ ದಿನಗಳಲ್ಲಿ ಬಿಜೆಪಿಗಳನ್ನೇ ಓವರ್​ ಟೇಕ್​ ಮಾಡಿ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿ ಇಲ್ಲ ಎಂದು ಕುಮಾರಸ್ವಾಮಿ ಅವರ ಕಾಲೆಳೆದಿದೆ.

ಬಿಜೆಪಿಯವರ ಒಳಜಗಳ ಕುಮಾರಸ್ವಾಮಿಯವರಿಗೆ ವರದಾನವಾಗಲಿದೆ ಎಂದಿರುವ ಕಾಂಗ್ರೆಸ್, ಬಿಜೆಪಿ ಹೈಕಮಾಂಡ್​ ಕುಮಾರಸ್ವಾಮಿಯವರನ್ನು ರಾಜ್ಯ ಬಿಜೆಪಿಗೆ ಪ್ರತಿಷ್ಠಾಪಿಸಿದರೂ ಅತಿಶಯೋಕ್ತಿ ಇಲ್ಲ. ಅಲ್ಲದೇ ಎಚ್ಚರದಿಂದಿರಿ ಎಂದು ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಟ್ಯಾಗ್‌ ಮಾಡಿ ಹೇಳಿದೆ.

ಮೊನ್ನೇ ಅಷ್ಟೇ ಕುಮಾರಸ್ವಾಮಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಆರ್​ಎಸ್​ಎಸ್​ ಪ್ರಭಾಕರ್ ಭಟ್ ಅವರ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತಿರುವ ಪ್ರಭಾಕರ್ ಭಟ್ಟರ ಬಗ್ಗೆ ತಪ್ಪು ಮಾಹಿತಿ ನೀಡಿದ್ದರು. ಹಾಗಾಗಿ ಈ ಹಿಂದೆ ಅವರನ್ನು ಏನೇನೋ ಟೀಕಿಸಿದ್ದೇನೆ. ಈಗ ನನ್ನಲ್ಲಿ ಪರಿವರ್ತನೆ ಆಗಿದೆ ಎಂದು ಪ್ರಭಾಕರ್ ಭಟ್​ ಅವರನ್ನು ಗುಣಗಾನ ಮಾಡಿದ್ದರು.

ಈ ಗುಣಗಾನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದ್ದು, ಎಚ್‌ಡಿಕೆ ಟ್ರೋಲ್‌ಗೆ ಗುರಿಯಾಗಿದ್ದಾರೆ.

andolanait

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

9 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

10 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

12 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

13 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

15 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

16 hours ago