ರಾಜ್ಯ

ಎಚ್‌ಡಿಕೆ ಬಿಜೆಪಿ ಅಧ್ಯಕ್ಷರಾದರು ಅಚ್ಚರಿಯಿಲ್ಲ: ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು : ಜೆಡಿಎಸ್​​ ಎನ್​ಡಿಎ ಜೊತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಇತ್ತ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್​ ಆಗುತ್ತಿದ್ದಾರೆ. ಇದೀಗ ಕಾಂಗ್ರೆಸ್ ಸಹ ಕುಮಾರಸ್ವಾಮಿ ಕಾಲೆಳೆದಿದ್ದು, ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಎಚ್​ಡಿ ಕುಮಾರಸ್ವಾಮಿಯವರು ಕೋಮುವಾದದ ಕಡೆ ಹೋಗುತ್ತಿರುವ ವೇಗ ನೋಡಿದರೆ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿಯಾಗಬೇಕಿಲ್ಲ ಎಂದು​ ಲೇವಡಿ ಮಾಡಿದೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಕುಮಾರಸ್ವಾಮಿಯವರು ಬಿಜೆಪಿಯವರಿಗಿಂತ ಹೆಚ್ಚು ಆರ್​ಎಸ್​ಎಸ್​ ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ. ಅವರು ಕೋಮುವಾದ ಕಡೆಗೆ ಹೋಗುತ್ತಿರುವ ವೇಗ ನೋಡಿದರೆ ಕಲವೇ ದಿನಗಳಲ್ಲಿ ಬಿಜೆಪಿಗಳನ್ನೇ ಓವರ್​ ಟೇಕ್​ ಮಾಡಿ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿ ಇಲ್ಲ ಎಂದು ಕುಮಾರಸ್ವಾಮಿ ಅವರ ಕಾಲೆಳೆದಿದೆ.

ಬಿಜೆಪಿಯವರ ಒಳಜಗಳ ಕುಮಾರಸ್ವಾಮಿಯವರಿಗೆ ವರದಾನವಾಗಲಿದೆ ಎಂದಿರುವ ಕಾಂಗ್ರೆಸ್, ಬಿಜೆಪಿ ಹೈಕಮಾಂಡ್​ ಕುಮಾರಸ್ವಾಮಿಯವರನ್ನು ರಾಜ್ಯ ಬಿಜೆಪಿಗೆ ಪ್ರತಿಷ್ಠಾಪಿಸಿದರೂ ಅತಿಶಯೋಕ್ತಿ ಇಲ್ಲ. ಅಲ್ಲದೇ ಎಚ್ಚರದಿಂದಿರಿ ಎಂದು ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಟ್ಯಾಗ್‌ ಮಾಡಿ ಹೇಳಿದೆ.

ಮೊನ್ನೇ ಅಷ್ಟೇ ಕುಮಾರಸ್ವಾಮಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಆರ್​ಎಸ್​ಎಸ್​ ಪ್ರಭಾಕರ್ ಭಟ್ ಅವರ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತಿರುವ ಪ್ರಭಾಕರ್ ಭಟ್ಟರ ಬಗ್ಗೆ ತಪ್ಪು ಮಾಹಿತಿ ನೀಡಿದ್ದರು. ಹಾಗಾಗಿ ಈ ಹಿಂದೆ ಅವರನ್ನು ಏನೇನೋ ಟೀಕಿಸಿದ್ದೇನೆ. ಈಗ ನನ್ನಲ್ಲಿ ಪರಿವರ್ತನೆ ಆಗಿದೆ ಎಂದು ಪ್ರಭಾಕರ್ ಭಟ್​ ಅವರನ್ನು ಗುಣಗಾನ ಮಾಡಿದ್ದರು.

ಈ ಗುಣಗಾನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದ್ದು, ಎಚ್‌ಡಿಕೆ ಟ್ರೋಲ್‌ಗೆ ಗುರಿಯಾಗಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago