ರಾಜ್ಯ

ಎಚ್‌ಡಿಕೆ ಬಿಜೆಪಿ ಅಧ್ಯಕ್ಷರಾದರು ಅಚ್ಚರಿಯಿಲ್ಲ: ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು : ಜೆಡಿಎಸ್​​ ಎನ್​ಡಿಎ ಜೊತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಇತ್ತ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್​ ಆಗುತ್ತಿದ್ದಾರೆ. ಇದೀಗ ಕಾಂಗ್ರೆಸ್ ಸಹ ಕುಮಾರಸ್ವಾಮಿ ಕಾಲೆಳೆದಿದ್ದು, ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಎಚ್​ಡಿ ಕುಮಾರಸ್ವಾಮಿಯವರು ಕೋಮುವಾದದ ಕಡೆ ಹೋಗುತ್ತಿರುವ ವೇಗ ನೋಡಿದರೆ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿಯಾಗಬೇಕಿಲ್ಲ ಎಂದು​ ಲೇವಡಿ ಮಾಡಿದೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಕುಮಾರಸ್ವಾಮಿಯವರು ಬಿಜೆಪಿಯವರಿಗಿಂತ ಹೆಚ್ಚು ಆರ್​ಎಸ್​ಎಸ್​ ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ. ಅವರು ಕೋಮುವಾದ ಕಡೆಗೆ ಹೋಗುತ್ತಿರುವ ವೇಗ ನೋಡಿದರೆ ಕಲವೇ ದಿನಗಳಲ್ಲಿ ಬಿಜೆಪಿಗಳನ್ನೇ ಓವರ್​ ಟೇಕ್​ ಮಾಡಿ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿ ಇಲ್ಲ ಎಂದು ಕುಮಾರಸ್ವಾಮಿ ಅವರ ಕಾಲೆಳೆದಿದೆ.

ಬಿಜೆಪಿಯವರ ಒಳಜಗಳ ಕುಮಾರಸ್ವಾಮಿಯವರಿಗೆ ವರದಾನವಾಗಲಿದೆ ಎಂದಿರುವ ಕಾಂಗ್ರೆಸ್, ಬಿಜೆಪಿ ಹೈಕಮಾಂಡ್​ ಕುಮಾರಸ್ವಾಮಿಯವರನ್ನು ರಾಜ್ಯ ಬಿಜೆಪಿಗೆ ಪ್ರತಿಷ್ಠಾಪಿಸಿದರೂ ಅತಿಶಯೋಕ್ತಿ ಇಲ್ಲ. ಅಲ್ಲದೇ ಎಚ್ಚರದಿಂದಿರಿ ಎಂದು ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಟ್ಯಾಗ್‌ ಮಾಡಿ ಹೇಳಿದೆ.

ಮೊನ್ನೇ ಅಷ್ಟೇ ಕುಮಾರಸ್ವಾಮಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಆರ್​ಎಸ್​ಎಸ್​ ಪ್ರಭಾಕರ್ ಭಟ್ ಅವರ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತಿರುವ ಪ್ರಭಾಕರ್ ಭಟ್ಟರ ಬಗ್ಗೆ ತಪ್ಪು ಮಾಹಿತಿ ನೀಡಿದ್ದರು. ಹಾಗಾಗಿ ಈ ಹಿಂದೆ ಅವರನ್ನು ಏನೇನೋ ಟೀಕಿಸಿದ್ದೇನೆ. ಈಗ ನನ್ನಲ್ಲಿ ಪರಿವರ್ತನೆ ಆಗಿದೆ ಎಂದು ಪ್ರಭಾಕರ್ ಭಟ್​ ಅವರನ್ನು ಗುಣಗಾನ ಮಾಡಿದ್ದರು.

ಈ ಗುಣಗಾನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದ್ದು, ಎಚ್‌ಡಿಕೆ ಟ್ರೋಲ್‌ಗೆ ಗುರಿಯಾಗಿದ್ದಾರೆ.

andolanait

Recent Posts

ಅಕ್ಕಿ ಬೆಲೆ ಹೆಚ್ಚಳ: ಗ್ರಾಹಕರ ಜೇಬಿಗೆ ಹೊರೆ

ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…

2 mins ago

ಧ್ರುವರ ಹೆಸರಿಗೆ ಹೊಳಪು ನೀಡುವ ಅಭಿಮಾನಿ ಬಳಗ

ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ  ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…

7 mins ago

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

24 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

24 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

24 hours ago