ರಾಜ್ಯ

ರಾಜಕೀಯ ಸಭೆ ಅಲ್ಲ ; ಭೇಟಿ ಅಷ್ಟೇ : ಪರಮೇಶ್ವರ್

ಬೆಂಗಳೂರು : ನಾನು, ಸತೀಶ್ ಜಾರಕಿಹೊಳಿ, ಡಾ.ಎಚ್.ಸಿ.ಮಹದೇವಪ್ಪ ಆಗಿಂದ್ದಾಗ್ಗೆ ಸೇರುತ್ತಿರುತ್ತೇವೆ. ಬೇರೆ ಸ್ನೇಹಿತರೆಲ್ಲ ಭೇಟಿಯಾಗುತ್ತೇವೆ. ಅದೆಲ್ಲ ಪೊಲಿಟಿಕಲ್ ಮೀಟಿಂಗ್ ಅಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ತಮ್ಮ ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದಲಿತ ಸಚಿವರ ರಹಸ್ಯ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿ, ‘ಅಂಥದ್ದೇನೂ ಆಗಿಲ್ಲ. ನಿಮ್ಮ ಕಣ್ಣಿಗೆ ಹೇಗೆ ಕಾಣಿಸುತ್ತೋ ಗೊತ್ತಿಲ್ಲ. ಇದೇನು ಮೊದಲ ಸಲ ಅಲ್ಲ. ಅನೇಕ ಬಾರಿ ನಾವು ಸೇರಿದ್ದೇವೆ ಎಂದರು.

ಇದನ್ನು ಓದಿ: ಸಂವಿಧಾನದಲ್ಲಿ ಸಾಂದರ್ಭಿಕ ಬದಲಾವಣೆ ಅಗತ್ಯ : ಮುಖ್ಯಮಂತ್ರಿ ಚಂದ್ರು ಅಭಿಮತ

ಸಚಿವ ಸಂಪುಟದಲ್ಲಿ ಕೆಲವು ವಿಷಯಗಳಿದ್ದವು. ಆ ಬಗ್ಗೆ ಕ್ಯಾಶುಯಲ್ ಮೀಟಿಂಗ್ ಅಷ್ಟೇ. ಇದರಲ್ಲಿ ಹೊಸದೇನೂ ಇಲ್ಲ. ಜಾರಕಿಹೊಳಿ ಹಾಗೂ ಮಹದೇವಪ್ಪ ಅವರ ಮನೆಯಲ್ಲಿ ಭೇಟಿ ಮಾಡುತ್ತೇವೆ. ದಲಿತ ನಾಯಕರ ಬೇಡಿಕೆ ಈಡೇರಿಲ್ಲ ಅಂದಿದ್ದು ಯಾರು? ಹೆಚ್ಚುವರಿ ಡಿಸಿಎಂ ಬಗ್ಗೆ ನಾನು ಒತ್ತಾಯ ಮಾಡಿಲ್ಲ. ಆ ಬಗ್ಗೆ ಸತೀಶ್ ಜಾರಕಿಹೊಳಿ, ರಾಜಣ್ಣ ಮಾತನಾಡಿದ್ದರು. ಈಗಲೇ ಆಗಬೇಕು ಅಂತ ಅಲ್ಲ‘ ಎಂದು ತಿಳಿಸಿದರು.

ಸಂಪುಟ ಪುನಾರಚನೆ ವಿಚಾರವಾಗಿ ಮಾತನಾಡಿ, ‘ಅದನ್ನು ಸಿಎಂ ಹತ್ತಿರವೇ ಕೇಳಬೇಕು. ಸಚಿವರ ಮೌಲ್ಯಮಾಪನದ ಬಗ್ಗೆ ಗೊತ್ತಿಲ್ಲ. ಇದು ನಿರಂತರ ಪ್ರಕ್ರಿಯೆ. ಪುನಾರಚನೆಗೆ ಅದನ್ನು ಅಟ್ಯಾಚ್ ಮಾಡುವುದು ಸರಿಯಲ್ಲ. ನವೆಂಬರ್ ಕ್ರಾಂತಿ ಯಾರು ಹೇಳಿದ್ದು?‘ ಎಂದು ಮರು ಪ್ರಶ್ನಿಸಿದರು.

‘ಒಳ ಮೀಸಲಾತಿ ಗೊಂದಲ ಇತ್ತು. ಅದನ್ನು ಸರಿ ಮಾಡಿದ್ದೇವೆ. ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆದಿದೆ. ಮೋದಿ ೨ ಕೋಟಿ ಉದ್ಯೋಗ ಕೊಡುತ್ತೇವೆ ಅಂದಿದ್ದರು. ಅವರು ಕೊಟ್ಟಿಲ್ಲ, ಅದಕ್ಕೆ ಟೀಕೆ ಮಾಡುತ್ತೇವೆ. ಐದು ಗ್ಯಾರಂಟಿ ಘೋಷಣೆ ಮಾಡಿದ್ದೆವು. ಅದನ್ನು ನಾವು ಜಾರಿ ಮಾಡಿದ್ದೇವೆ‘ ಎಂದರು.

ಆಂದೋಲನ ಡೆಸ್ಕ್

Recent Posts

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

9 mins ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

18 mins ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

48 mins ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

60 mins ago

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

1 hour ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

2 hours ago