ರಾಜ್ಯ

ರಾಜಕೀಯ ಸಭೆ ಅಲ್ಲ ; ಭೇಟಿ ಅಷ್ಟೇ : ಪರಮೇಶ್ವರ್

ಬೆಂಗಳೂರು : ನಾನು, ಸತೀಶ್ ಜಾರಕಿಹೊಳಿ, ಡಾ.ಎಚ್.ಸಿ.ಮಹದೇವಪ್ಪ ಆಗಿಂದ್ದಾಗ್ಗೆ ಸೇರುತ್ತಿರುತ್ತೇವೆ. ಬೇರೆ ಸ್ನೇಹಿತರೆಲ್ಲ ಭೇಟಿಯಾಗುತ್ತೇವೆ. ಅದೆಲ್ಲ ಪೊಲಿಟಿಕಲ್ ಮೀಟಿಂಗ್ ಅಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ತಮ್ಮ ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದಲಿತ ಸಚಿವರ ರಹಸ್ಯ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿ, ‘ಅಂಥದ್ದೇನೂ ಆಗಿಲ್ಲ. ನಿಮ್ಮ ಕಣ್ಣಿಗೆ ಹೇಗೆ ಕಾಣಿಸುತ್ತೋ ಗೊತ್ತಿಲ್ಲ. ಇದೇನು ಮೊದಲ ಸಲ ಅಲ್ಲ. ಅನೇಕ ಬಾರಿ ನಾವು ಸೇರಿದ್ದೇವೆ ಎಂದರು.

ಇದನ್ನು ಓದಿ: ಸಂವಿಧಾನದಲ್ಲಿ ಸಾಂದರ್ಭಿಕ ಬದಲಾವಣೆ ಅಗತ್ಯ : ಮುಖ್ಯಮಂತ್ರಿ ಚಂದ್ರು ಅಭಿಮತ

ಸಚಿವ ಸಂಪುಟದಲ್ಲಿ ಕೆಲವು ವಿಷಯಗಳಿದ್ದವು. ಆ ಬಗ್ಗೆ ಕ್ಯಾಶುಯಲ್ ಮೀಟಿಂಗ್ ಅಷ್ಟೇ. ಇದರಲ್ಲಿ ಹೊಸದೇನೂ ಇಲ್ಲ. ಜಾರಕಿಹೊಳಿ ಹಾಗೂ ಮಹದೇವಪ್ಪ ಅವರ ಮನೆಯಲ್ಲಿ ಭೇಟಿ ಮಾಡುತ್ತೇವೆ. ದಲಿತ ನಾಯಕರ ಬೇಡಿಕೆ ಈಡೇರಿಲ್ಲ ಅಂದಿದ್ದು ಯಾರು? ಹೆಚ್ಚುವರಿ ಡಿಸಿಎಂ ಬಗ್ಗೆ ನಾನು ಒತ್ತಾಯ ಮಾಡಿಲ್ಲ. ಆ ಬಗ್ಗೆ ಸತೀಶ್ ಜಾರಕಿಹೊಳಿ, ರಾಜಣ್ಣ ಮಾತನಾಡಿದ್ದರು. ಈಗಲೇ ಆಗಬೇಕು ಅಂತ ಅಲ್ಲ‘ ಎಂದು ತಿಳಿಸಿದರು.

ಸಂಪುಟ ಪುನಾರಚನೆ ವಿಚಾರವಾಗಿ ಮಾತನಾಡಿ, ‘ಅದನ್ನು ಸಿಎಂ ಹತ್ತಿರವೇ ಕೇಳಬೇಕು. ಸಚಿವರ ಮೌಲ್ಯಮಾಪನದ ಬಗ್ಗೆ ಗೊತ್ತಿಲ್ಲ. ಇದು ನಿರಂತರ ಪ್ರಕ್ರಿಯೆ. ಪುನಾರಚನೆಗೆ ಅದನ್ನು ಅಟ್ಯಾಚ್ ಮಾಡುವುದು ಸರಿಯಲ್ಲ. ನವೆಂಬರ್ ಕ್ರಾಂತಿ ಯಾರು ಹೇಳಿದ್ದು?‘ ಎಂದು ಮರು ಪ್ರಶ್ನಿಸಿದರು.

‘ಒಳ ಮೀಸಲಾತಿ ಗೊಂದಲ ಇತ್ತು. ಅದನ್ನು ಸರಿ ಮಾಡಿದ್ದೇವೆ. ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆದಿದೆ. ಮೋದಿ ೨ ಕೋಟಿ ಉದ್ಯೋಗ ಕೊಡುತ್ತೇವೆ ಅಂದಿದ್ದರು. ಅವರು ಕೊಟ್ಟಿಲ್ಲ, ಅದಕ್ಕೆ ಟೀಕೆ ಮಾಡುತ್ತೇವೆ. ಐದು ಗ್ಯಾರಂಟಿ ಘೋಷಣೆ ಮಾಡಿದ್ದೆವು. ಅದನ್ನು ನಾವು ಜಾರಿ ಮಾಡಿದ್ದೇವೆ‘ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago