ಬೆಂಗಳೂರು: ಬಿಜೆಪಿ ಕೇಂದ್ರಿಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿರುವ ಕುರಿತು ಶಾಸಕ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ನ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ. ನಾನು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ನಾನು ಕಳೆದ ಕೆಲ ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಗಾಂಧಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದೆ. ನನ್ನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನ ಎಲ್ಲಾ ಸಚಿವರ ಜೊತೆ ಮಾತನಾಡುತ್ತೇನೆ. ನನ್ನ ಕ್ಷೇತ್ರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಂದರೂ ಸಹ ಮಾತನಾಡುತ್ತೇನೆ. ಆದರೆ ನಾನು ಕಾಂಗ್ರೆಸ್ನ ಯಾವ ಕಾರ್ಯಕ್ರಮದಲ್ಲೂ ಭಾಗಿಯಾಗಿಲ್ಲ. ಬಿಜೆಪಿಯವರೇ ಅಪಪ್ರಚಾರ ಮಾಡಿದ್ದಾರೆ ಅಷ್ಟೇ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಬಿಜೆಪಿಗೆ ಮುಜುಗರ ಆಗುವಂತಹ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸಿಲ್ಲ. ನನಗೆ ಬಂದಿರುವ ನೋಟಿಸ್ಗೆ ಉತ್ತರ ನೀಡುತ್ತೇನೆ. ನನ್ನ ವಕೀಲರ ಜೊತೆ ಚರ್ಚಿಸಿ ಉತ್ತರ ಕೊಡುತ್ತೇನೆ ಎಂದು ಹೇಳಿದರು.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…