ರಾಜ್ಯ

ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂಘ ಪರಿವಾರದ ಕೆ.ಎನ್‌ ಗೋವಿಂದಾಚಾರ್ಯ ಅವರು ಸ್ಥಾಪಿಸಿರುವ ಭಾರತ ವಿಕಾಸ ಸಂಗಮ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ತಮ್ಮ ಭಾಗವಹಿಸುವಿಕೆ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಾಗಳಿಗೆ ತೆರೆ ಎಳೆದಿದ್ದಾರೆ.

2025ರ ಜನವರಿ ಮಾಹೆಯಲ್ಲಿ ಕಲಬುರ್ಗಿಯ ಸೇಡಂನಲ್ಲಿ ಭಾರತ ವಿಕಾಸ ಸಂಗಮ ಸಂಸ್ಥೆಯು ʻಭಾರತೀಯ ಸಂಸ್ಕೃತಿ ಉತ್ಸವ-7ʼ ಎಂಬ ಕಾರ್ಯಕ್ರಮವನ್ನು ಆಯೋಜಿಸಿದೆ. ಆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿಯೊಂದಿಗೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಂಘಪರಿವನ್ನು ಸೈದ್ದಾಂತಿಕವಾಗಿ ವಿರೋಧಿಸುವ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ ಎಂಬುದು ಸಾಕಷ್ಟು ವಿರೋಧ, ಆಕ್ಷೇಪ ಹಾಗೂ ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.

ಸದ್ಯ ತಮ್ಮ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದಿರುವ ಸಿಎಂ ಸಿದ್ದರಾಮಯ್ಯ ಅವರು ಸಂಘ ಪರಿವಾರದ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಿದ್ದರಾಮಯ್ಯ, ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ. ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶ್ರವಣದೋಷ ಮೆಟ್ಟಿನಿಂತು ಸಾಧನೆ ಮಾಡಿದ ಮಹದೇವ ಪ್ರಸಾದ್ ಕೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ…

18 mins ago

ಗುಂಡ್ಲುಪೇಟೆಯಲ್ಲಿ ಮುಳ್ಳುಹಂದಿ ದಾಳಿಗೆ ಚಿರತೆ ಸಾವು

ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.…

28 mins ago

ಏಪ್ರಿಲ್.16ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ

ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್.‌16ರಂದು ಕರೆಯಲಾಗಿದೆ. ಏಪ್ರಿಲ್.‌16ರ ಸಂಜೆ 4.30ಕ್ಕೆ ವಿಧಾನಸೌಧದ…

43 mins ago

ಕಾಂಗ್ರೆಸ್‌ ಆಡಳಿತದಲ್ಲಿ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಸಿದು ಹೋಗಿವೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌…

1 hour ago

10 ದಿನ ಚಂದ್ರನ ಸುತ್ತಿ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಆರ್ಟೆಮಿಸ್‌-2 ಗಗನಯಾತ್ರಿಗಳು

ವಾಷಿಂಗ್ಟನ್ : ನಾಸಾದ ಐತಿಹಾಸಿಕ ಆರ್ಟೆಮಿಸ್‌-2 ಮಿಷನ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಂದ್ರನನ್ನು ಸುತ್ತುವಳಿ ಮಾಡಿ ಭೂಮಿಗೆ ವಾಪಸಾಗುವ ಮೊದಲ ಕ್ರೂಡ್…

1 hour ago

ಅಮೆರಿಕ-ಇರಾನ್‌ ಕದನ ವಿರಾಮ | ಶಾಂತಿ ಮಾತುಕತೆಗೆ ಪಾಕ್‌ಗೆ ಬಂದಿಳಿದ ಇರಾನ್‌ ನಿಯೋಗ

ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್…

2 hours ago