ಬೆಂಗಳೂರು: ಸಂಘ ಪರಿವಾರದ ಕೆ.ಎನ್ ಗೋವಿಂದಾಚಾರ್ಯ ಅವರು ಸ್ಥಾಪಿಸಿರುವ ಭಾರತ ವಿಕಾಸ ಸಂಗಮ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ತಮ್ಮ ಭಾಗವಹಿಸುವಿಕೆ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಾಗಳಿಗೆ ತೆರೆ ಎಳೆದಿದ್ದಾರೆ.
2025ರ ಜನವರಿ ಮಾಹೆಯಲ್ಲಿ ಕಲಬುರ್ಗಿಯ ಸೇಡಂನಲ್ಲಿ ಭಾರತ ವಿಕಾಸ ಸಂಗಮ ಸಂಸ್ಥೆಯು ʻಭಾರತೀಯ ಸಂಸ್ಕೃತಿ ಉತ್ಸವ-7ʼ ಎಂಬ ಕಾರ್ಯಕ್ರಮವನ್ನು ಆಯೋಜಿಸಿದೆ. ಆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿಯೊಂದಿಗೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಂಘಪರಿವನ್ನು ಸೈದ್ದಾಂತಿಕವಾಗಿ ವಿರೋಧಿಸುವ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ ಎಂಬುದು ಸಾಕಷ್ಟು ವಿರೋಧ, ಆಕ್ಷೇಪ ಹಾಗೂ ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.
ಸದ್ಯ ತಮ್ಮ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದಿರುವ ಸಿಎಂ ಸಿದ್ದರಾಮಯ್ಯ ಅವರು ಸಂಘ ಪರಿವಾರದ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ. ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ ಎಂದು ಸ್ಪಷ್ಟ ಪಡಿಸಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…