ಬೆಂಗಳೂರು: ಕರ್ನಾಟಕ ಮತ್ತು ಕೇರಳ ನಡುವೆ ಬಂಡೀಪುರ ಮತ್ತು ವಯನಾಡು ನಡುವೆ ರಾತ್ರಿ ಸಂಚಾರ, ಪ್ರಸ್ತುತ ರಾತ್ರಿ 9ರವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರ ಹೊರತಾಗಿಯೂ ಎರಡೂ ಕಡೆಯಿಂದ 2 ಬಸ್ ಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ ವಾಹನಗಳನ್ನು ಪರಿಶೀಲಿಸಿ ಬಿಡಲಾಗುತ್ತಿದೆ. ಹೀಗಾಗಿ ರಾತ್ರಿ ಸಂಚಾರಕ್ಕೆ ಯಾವುದೇ ತೊಡಕಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅರಣ್ಯದೊಳಗೆ ಅಳವಡಿಸಲಾಗಿರುವ ವಿದ್ಯುತ್ ತಂತಿಗಳು ಕೆಲವೆಡೆ ಜೋತು ಬಿದ್ದಿದ್ದು, ಆನೆಗಳು ಸಾವಿಗೀಡಾಗುತ್ತಿವೆ. ವಿದ್ಯುತ್ ತಂತಿ ತೂಗಾಡದಂತೆ ಕ್ರಮ ವಹಿಸಲು ಮತ್ತು ಅಂತರ್ಗತ ಕೇಬಲ್ ಅಳವಡಿಸಿಲು ವಿದ್ಯುತ್ ಕಂಪನಿಗಳಿಗೆ ತಿಳಿಸಿರುವುದಾಗಿ ಹೇಳಿದರು.
ಆನೆಗಳಿಂದ ಬೆಳೆಹಾನಿ ಮತ್ತು ಜೀವಹಾನಿ ಆಗುತ್ತಿದ್ದು, ಇದನ್ನು ತಪ್ಪಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ನಿರ್ಮಿಸಲು ಯೋಜನೆ ರೂಪಿಸಲಾಗತ್ತಿದೆ. ಇದಕ್ಕೆ 100 ಕೋಟಿ ರೂ. ಅಗತ್ಯವಿದ್ದು, ಬಜೆಟ್ ನಲ್ಲಿ ಅನುದಾನ ನೀಡುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.
ಅರಣ್ಯವಾಸಿಗಳ ಸ್ಥಳಾಂತರ:
ರಾಜ್ಯದ ರಾಷ್ಟ್ರೀಯ ಉದ್ಯಾನ, ವನ್ಯಜೀವಿ ಅಭಯಾರಣ್ಯ, ಮೀಸಲು ಅರಣ್ಯ, ಹುಲಿ ಸಂರಕ್ಷಿತ ಅರಣ್ಯ ಸೇರಿದಂತೆ ವಿವಿಧ ಅರಣ್ಯಗಳಲ್ಲಿ ಹಲವಾರು ವರ್ಷಗಳಿಂದ ಅರಣ್ಯವಾಸಿಗಳು ಜೀವಿಸುತ್ತಿದ್ದು, ಗಂಡ, ಹೆಂಡತಿ ಒಳಗೊಂಡು ಪ್ರತಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಿ ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು ಎಂದರು.
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…
ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…
‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…