ಬೆಂಗಳೂರು: ರಾಜ್ಯಪಾಲರ ಕಛೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ, ಸಂಪುಟ ಸಚಿವರು ಹಾಗೂ ಇಡೀ ಇಂಡಿಯಾ ಒಕ್ಕೂಟ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.
ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಿಎಂ ನಾವಿದ್ದೇವೆ. ಸಿಎಂ ಮೇಲೆ ಯಾವುದೇ ಪ್ರಕರಣ ಇಲ್ಲ. ಅದರೂ ಸಿಎಂ ಮೇಲೆ ಕೇಸ್ ಮಾಡಿದ್ದಾರೆ. ಕಾನೂನು ರೀತಿಯ ಹೋರಾಟ ಮಾಡುತ್ತೇವೆ. ರಾಜಕೀಯವಾಗಿಯೂ ಹೋರಾಟ ಮಾಡುತ್ತೇವೆ. ಈ ಪ್ರಾಸಿಕ್ಯೂಷನ್ ಕಾನೂನಿಗೆ ವಿರುದ್ಧವಾಗಿದೆ ಎಂದು ಹೇಳಿದರು.
78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಮಾಡಿದ್ದೇವೆ. ರಾಜ್ಯಪಾಲರು ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವಕ್ಕೆ ಮಾರಕವಾದ ಪತ್ರ ಕಳುಹಿಸಿದ್ದಾರೆ. ರಾಜ್ಯಪಾಲರ 26.7.2024ರ ನೋಟಿಸ್ ಸಂಬಂಧ ಏಪ್ರಿಲ್ 1ರಂದು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದೇವೆ. ಆ ದೂರಿನಲ್ಲಿ ತಿರುಳು ಇಲ್ಲ. ಸಂವಿಧಾನದ ಅಂಶಗಳನ್ನು ತಿಳಿ ತಿಳಿಯಾಗಿ ಹೇಳಿದ್ದೇವೆ. ಇದು ರಾಜಕೀಯ ಪಿತೂರಿ. ಮುಡಾ ಪ್ರಕರಣದಲ್ಲಿ ಯಾವುದೇ ಲೋಪದೋಷ ಆಗಿಲ್ಲ ಎಂದು ರಾಜ್ಯಪಾಲರಿಗೆ ತಿಳಿಸಿದ್ದೇವೆ ಎಂದರು.
ಹಿಂದುಳಿದ ವರ್ಗದ ನಾಯಕ ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಬೆಳೆಯುತ್ತಿರುವುದನ್ನು ಸಹಿಸಲಾಗಿದೇ ಕೇಂದ್ರ ಬಿಜೆಪಿ ಸರ್ಕಾರ ದೊಡ್ಡ ಪಿತೂರಿ ನಡೆಸಿದೆ, ಇದನ್ನು ಧಿಕ್ಕರಿಸಿ ನಾವು ಹೋರಾಟ ಮಾಡುತ್ತೇವೆ. ರಾಜ್ಯಪಾರಲ ಕಛೇರಿ ಬಿಜೆಪಿ ಪಕ್ಷದ ಕೈಗೊಂಬೆಯಾಗಬಾರದು ಎಂದರು.
ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಲೋಕಾಯುಕ್ತದಲ್ಲಿ ತನಿಖೆ ನಡೆದಿದೆ. ಅವರ ವಿರುದ್ಧ ಲೋಕಾಯುಕ್ತ, ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ ಅನುಮತಿ ಕೋರಿ ಮನವಿ ಮಾಡಿದ್ದಾರೆ. ಅಕ್ರಮ ಗಣಿಗಾರಿಕೆ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಮನವಿ ಸಲ್ಲಿಸಿದ್ದರು. ಜನಾರ್ದನ ರೆಡ್ಡಿ, ಜೊಲ್ಲೆ, ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಲಾಗಿತ್ತು. ಅದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಆದರೆ ಈ ಪ್ರಕರಣದಲ್ಲಿ ದೂರು ಬಂದ ಒಂದೇ ದಿನದಲ್ಲಿ ರಾಜ್ಯಪಾಲರು ನೋಟಿಸ್ ಕಳುಹಿಸಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 136 ಶಾಸಕರ ಬಲದ ಮತ್ತು ರಾಜ್ಯದ ಜನರ ವಿರುದ್ಧದ ತೀರ್ಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಪಾಲರ ಕಛೇರಿ ದುರ್ಬಳಕೆಯಾಗುತ್ತಿದೆ. ಜೋಶಿ, ಕುಮಾರಸ್ವಾಮಿ ಈ ಸರ್ಕಾರ ಬೀಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಅದಕ್ಕೆ ಪೂರಕವಾಗಿ ಈ ಪೂರ್ವಾನುಮತಿ ನೀಡಲಾಗಿದೆ ಎಂದು ಆರೋಪಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…