ರಾಜ್ಯ

ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ: ತಮ್ಮದೇ ಸರ್ಕಾರಕ್ಕೆ ರಾಜೀನಾಮೆ ಎಚ್ಚರಿಕೆ ನೀಡಿದ ಶಾಸಕ

ಚಿಕ್ಕೋಡಿ(ಬೆಳಗಾವಿ): ಸರ್ಕಾರ ನಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಜೊತೆಗೆ ರೈತರ ಪರ ಯಾವುದೇ ಯೋಜನೆಗಳು ಬರುತ್ತಿಲ್ಲ. ರೈತರು ಬದುಕು ನಡೆಸುವುದು ದುಸ್ತರವಾಗಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ, ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದರು.

ಕಾಗವಾಡ ವಿಧಾನಸಭಾ ಕ್ಷೇತ್ರದ ತಾವಂಶಿ ಗ್ರಾಮದಲ್ಲಿ ಮಾತನಾಡಿದ ಅವರು, ರೈತರು ಒಂದು ವರ್ಷ ಬೆಳೆಗಳನ್ನು ಬೆಳೆಯುವುದನ್ನು ಬಿಟ್ಟರೆ ನೀವೇನು ತಿಂತೀರಿ?. ನಿಮ್ಮ ಬಳಿ ಹಣ, ಬಂಗಾರ ಬೆಳ್ಳಿ ಸಾಕಷ್ಟಿರಬಹುದು. ಅದನ್ನು ತಿಂದು ಬದುಕೋಗಾಗುತ್ತಾ?. ಮೊದಲು ರೈತರನ್ನು ಬದುಕಿಸುವ ಕೆಲಸ ಮಾಡಿ. ರೈತರು ಬದುಕಿದರೆ ಮಾತ್ರ ದೇಶ ಪ್ರಗತಿ ಹೊಂದಲು ಸಾಧ್ಯ ಎಂದು ತಮ್ಮ ಪಕ್ಷದ ವಿರುದ್ಧ ಅಸಮಪರ್ಕತೆ ವ್ಯಕ್ತಪಡಿಸಿದರು.

ಕಳೆದ ಒಂದು ವರ್ಷದಿಂದ ನನ್ನ ಗೋಳನ್ನು ಸರ್ಕಾರ ಆಲಿಸುತ್ತಿಲ್ಲ. ಹೀಗೆಯೇ ಪರಿಸ್ಥಿತಿ ಮುಂದುವರಿದರೆ ವಿಧಾನಸೌಧದಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಓರ್ವ ಮಂತ್ರಿಗೆ ಹೇಳಿದೆ. ಆದರೆ ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ತೀಯಾ, ನಿನ್ನ ಕೆಲಸ ಮಾಡಿಕೊಡ್ತೀವಿ ಎಂದು ಮಂತ್ರಿಗಳು ಹೇಳಿದರು ಎಂದು ಆಕ್ರೋಶ  ವ್ಯಕ್ತಪಡಿಸಿದರು.

ನಾವೇನು ವಿಧಾನಸೌಧಕ್ಕೆ ಹೋಗಿ ಖಾಲಿ ಕುಂತಿಲ್ಲ, ಮೋಜು, ಮಸ್ತಿ ಮಾಡುತ್ತಿಲ್ಲ. ರೈತರ ಕಷ್ಟ-ಸುಖಗಳ ಕುರಿತು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದೇನೆ. ಆದರೆ, ಸರ್ಕಾರದವರು ನಮಗೆ ಸ್ಪಂದಿಸುತ್ತಿಲ್ಲ. ಬೇಕಾದರೆ ನಾಳೆನೇ ಹೋಗಿ ರಾಜೀನಾಮೆ ಕೊಡುತ್ತೇನೆ” ಎಂದು ಆಕ್ರೋಶ ಹೊರಹಾಕಿದರು.

ಆಡಳಿತ ಪಕ್ಷದ ಒಬ್ಬ ಶಾಸಕನಾಗಿ ಅಸಹಾಯಕತೆ ಬಗ್ಗೆ ಹೇಳ್ತಿದ್ದೀನಿ ಅಂದ್ರೆ ಎಷ್ಟರಮಟ್ಟಿಗೆ ಈ ವ್ಯವಸ್ಥೆಯಲ್ಲಿ ಬದುಕಿದ್ದೇವೆ ಎಂಬುದನ್ನು ಅರ್ಥ ಮಾಡ್ಕೊಳ್ಳಿ. ಸರ್ಕಾರದ ನಡೆಯಿಂದಾಗಿ ನನ್ನ ಮನಸ್ಸಿಗೆ ಬಹಳ ನೋವಾಗಿದೆ. ಹೀಗಾಗಿ ಮುಂದಿನ ನಾನು ಎಂಎಲ್ಎ ಆಗುವುದು ಬೇಕಾಗಿಲ್ಲ” ಎಂದು ಕ್ಷೇತ್ರದ ಜನತೆ ಮುಂದೆಯೇ ತಮ್ಮ ಅಸಹಾಯಕತೆ ತೋಡಿಕೊಂಡರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ ; ಪರಿಶೀಲಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

18 mins ago

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಮಗ್ರ ಓದಿಗೆ ಒತ್ತು ನೀಡಿ : ಎಸ್‌.ಪಿ ಮಲ್ಲಿಕಾರ್ಜುನ ಬಾಲದಂಡಿ

ಮೈಸೂರು : ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ…

39 mins ago

ಸಾಮರ್ಥ್ಯ ವೃದ್ಧಿಗೆ ಎಐ ಬಳಸಿಕೊಳ್ಳಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಕೃತಕ ಬುದ್ಧಿಮತ್ತೆಗೆ ಗುಲಾಮರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ…

52 mins ago

ನಾಪೋಕ್ಲು| ಕಾಡಾನೆ ದಾಳಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…

3 hours ago

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್‌ ಭೇಟಿ

ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್‌ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…

3 hours ago

ಹನೂರು| ಕುಡಿಯುವ ನೀರಿಗಾಗಿ ಪರದಾಟ: ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…

3 hours ago