ರಾಜ್ಯ

ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ: ತಮ್ಮದೇ ಸರ್ಕಾರಕ್ಕೆ ರಾಜೀನಾಮೆ ಎಚ್ಚರಿಕೆ ನೀಡಿದ ಶಾಸಕ

ಚಿಕ್ಕೋಡಿ(ಬೆಳಗಾವಿ): ಸರ್ಕಾರ ನಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಜೊತೆಗೆ ರೈತರ ಪರ ಯಾವುದೇ ಯೋಜನೆಗಳು ಬರುತ್ತಿಲ್ಲ. ರೈತರು ಬದುಕು ನಡೆಸುವುದು ದುಸ್ತರವಾಗಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ, ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದರು.

ಕಾಗವಾಡ ವಿಧಾನಸಭಾ ಕ್ಷೇತ್ರದ ತಾವಂಶಿ ಗ್ರಾಮದಲ್ಲಿ ಮಾತನಾಡಿದ ಅವರು, ರೈತರು ಒಂದು ವರ್ಷ ಬೆಳೆಗಳನ್ನು ಬೆಳೆಯುವುದನ್ನು ಬಿಟ್ಟರೆ ನೀವೇನು ತಿಂತೀರಿ?. ನಿಮ್ಮ ಬಳಿ ಹಣ, ಬಂಗಾರ ಬೆಳ್ಳಿ ಸಾಕಷ್ಟಿರಬಹುದು. ಅದನ್ನು ತಿಂದು ಬದುಕೋಗಾಗುತ್ತಾ?. ಮೊದಲು ರೈತರನ್ನು ಬದುಕಿಸುವ ಕೆಲಸ ಮಾಡಿ. ರೈತರು ಬದುಕಿದರೆ ಮಾತ್ರ ದೇಶ ಪ್ರಗತಿ ಹೊಂದಲು ಸಾಧ್ಯ ಎಂದು ತಮ್ಮ ಪಕ್ಷದ ವಿರುದ್ಧ ಅಸಮಪರ್ಕತೆ ವ್ಯಕ್ತಪಡಿಸಿದರು.

ಕಳೆದ ಒಂದು ವರ್ಷದಿಂದ ನನ್ನ ಗೋಳನ್ನು ಸರ್ಕಾರ ಆಲಿಸುತ್ತಿಲ್ಲ. ಹೀಗೆಯೇ ಪರಿಸ್ಥಿತಿ ಮುಂದುವರಿದರೆ ವಿಧಾನಸೌಧದಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಓರ್ವ ಮಂತ್ರಿಗೆ ಹೇಳಿದೆ. ಆದರೆ ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ತೀಯಾ, ನಿನ್ನ ಕೆಲಸ ಮಾಡಿಕೊಡ್ತೀವಿ ಎಂದು ಮಂತ್ರಿಗಳು ಹೇಳಿದರು ಎಂದು ಆಕ್ರೋಶ  ವ್ಯಕ್ತಪಡಿಸಿದರು.

ನಾವೇನು ವಿಧಾನಸೌಧಕ್ಕೆ ಹೋಗಿ ಖಾಲಿ ಕುಂತಿಲ್ಲ, ಮೋಜು, ಮಸ್ತಿ ಮಾಡುತ್ತಿಲ್ಲ. ರೈತರ ಕಷ್ಟ-ಸುಖಗಳ ಕುರಿತು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದೇನೆ. ಆದರೆ, ಸರ್ಕಾರದವರು ನಮಗೆ ಸ್ಪಂದಿಸುತ್ತಿಲ್ಲ. ಬೇಕಾದರೆ ನಾಳೆನೇ ಹೋಗಿ ರಾಜೀನಾಮೆ ಕೊಡುತ್ತೇನೆ” ಎಂದು ಆಕ್ರೋಶ ಹೊರಹಾಕಿದರು.

ಆಡಳಿತ ಪಕ್ಷದ ಒಬ್ಬ ಶಾಸಕನಾಗಿ ಅಸಹಾಯಕತೆ ಬಗ್ಗೆ ಹೇಳ್ತಿದ್ದೀನಿ ಅಂದ್ರೆ ಎಷ್ಟರಮಟ್ಟಿಗೆ ಈ ವ್ಯವಸ್ಥೆಯಲ್ಲಿ ಬದುಕಿದ್ದೇವೆ ಎಂಬುದನ್ನು ಅರ್ಥ ಮಾಡ್ಕೊಳ್ಳಿ. ಸರ್ಕಾರದ ನಡೆಯಿಂದಾಗಿ ನನ್ನ ಮನಸ್ಸಿಗೆ ಬಹಳ ನೋವಾಗಿದೆ. ಹೀಗಾಗಿ ಮುಂದಿನ ನಾನು ಎಂಎಲ್ಎ ಆಗುವುದು ಬೇಕಾಗಿಲ್ಲ” ಎಂದು ಕ್ಷೇತ್ರದ ಜನತೆ ಮುಂದೆಯೇ ತಮ್ಮ ಅಸಹಾಯಕತೆ ತೋಡಿಕೊಂಡರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

30 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

3 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

18 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

18 hours ago