ರಾಜ್ಯ

ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ: ತಮ್ಮದೇ ಸರ್ಕಾರಕ್ಕೆ ರಾಜೀನಾಮೆ ಎಚ್ಚರಿಕೆ ನೀಡಿದ ಶಾಸಕ

ಚಿಕ್ಕೋಡಿ(ಬೆಳಗಾವಿ): ಸರ್ಕಾರ ನಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಜೊತೆಗೆ ರೈತರ ಪರ ಯಾವುದೇ ಯೋಜನೆಗಳು ಬರುತ್ತಿಲ್ಲ. ರೈತರು ಬದುಕು ನಡೆಸುವುದು ದುಸ್ತರವಾಗಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ, ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದರು.

ಕಾಗವಾಡ ವಿಧಾನಸಭಾ ಕ್ಷೇತ್ರದ ತಾವಂಶಿ ಗ್ರಾಮದಲ್ಲಿ ಮಾತನಾಡಿದ ಅವರು, ರೈತರು ಒಂದು ವರ್ಷ ಬೆಳೆಗಳನ್ನು ಬೆಳೆಯುವುದನ್ನು ಬಿಟ್ಟರೆ ನೀವೇನು ತಿಂತೀರಿ?. ನಿಮ್ಮ ಬಳಿ ಹಣ, ಬಂಗಾರ ಬೆಳ್ಳಿ ಸಾಕಷ್ಟಿರಬಹುದು. ಅದನ್ನು ತಿಂದು ಬದುಕೋಗಾಗುತ್ತಾ?. ಮೊದಲು ರೈತರನ್ನು ಬದುಕಿಸುವ ಕೆಲಸ ಮಾಡಿ. ರೈತರು ಬದುಕಿದರೆ ಮಾತ್ರ ದೇಶ ಪ್ರಗತಿ ಹೊಂದಲು ಸಾಧ್ಯ ಎಂದು ತಮ್ಮ ಪಕ್ಷದ ವಿರುದ್ಧ ಅಸಮಪರ್ಕತೆ ವ್ಯಕ್ತಪಡಿಸಿದರು.

ಕಳೆದ ಒಂದು ವರ್ಷದಿಂದ ನನ್ನ ಗೋಳನ್ನು ಸರ್ಕಾರ ಆಲಿಸುತ್ತಿಲ್ಲ. ಹೀಗೆಯೇ ಪರಿಸ್ಥಿತಿ ಮುಂದುವರಿದರೆ ವಿಧಾನಸೌಧದಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಓರ್ವ ಮಂತ್ರಿಗೆ ಹೇಳಿದೆ. ಆದರೆ ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ತೀಯಾ, ನಿನ್ನ ಕೆಲಸ ಮಾಡಿಕೊಡ್ತೀವಿ ಎಂದು ಮಂತ್ರಿಗಳು ಹೇಳಿದರು ಎಂದು ಆಕ್ರೋಶ  ವ್ಯಕ್ತಪಡಿಸಿದರು.

ನಾವೇನು ವಿಧಾನಸೌಧಕ್ಕೆ ಹೋಗಿ ಖಾಲಿ ಕುಂತಿಲ್ಲ, ಮೋಜು, ಮಸ್ತಿ ಮಾಡುತ್ತಿಲ್ಲ. ರೈತರ ಕಷ್ಟ-ಸುಖಗಳ ಕುರಿತು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದೇನೆ. ಆದರೆ, ಸರ್ಕಾರದವರು ನಮಗೆ ಸ್ಪಂದಿಸುತ್ತಿಲ್ಲ. ಬೇಕಾದರೆ ನಾಳೆನೇ ಹೋಗಿ ರಾಜೀನಾಮೆ ಕೊಡುತ್ತೇನೆ” ಎಂದು ಆಕ್ರೋಶ ಹೊರಹಾಕಿದರು.

ಆಡಳಿತ ಪಕ್ಷದ ಒಬ್ಬ ಶಾಸಕನಾಗಿ ಅಸಹಾಯಕತೆ ಬಗ್ಗೆ ಹೇಳ್ತಿದ್ದೀನಿ ಅಂದ್ರೆ ಎಷ್ಟರಮಟ್ಟಿಗೆ ಈ ವ್ಯವಸ್ಥೆಯಲ್ಲಿ ಬದುಕಿದ್ದೇವೆ ಎಂಬುದನ್ನು ಅರ್ಥ ಮಾಡ್ಕೊಳ್ಳಿ. ಸರ್ಕಾರದ ನಡೆಯಿಂದಾಗಿ ನನ್ನ ಮನಸ್ಸಿಗೆ ಬಹಳ ನೋವಾಗಿದೆ. ಹೀಗಾಗಿ ಮುಂದಿನ ನಾನು ಎಂಎಲ್ಎ ಆಗುವುದು ಬೇಕಾಗಿಲ್ಲ” ಎಂದು ಕ್ಷೇತ್ರದ ಜನತೆ ಮುಂದೆಯೇ ತಮ್ಮ ಅಸಹಾಯಕತೆ ತೋಡಿಕೊಂಡರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

4 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

4 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

4 hours ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

4 hours ago

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…

5 hours ago

ಎಸ್‌ಐಆರ್: ಶೇ.64.09ರಷ್ಟು ನಮೂನೆಗಳ ವಿತರಣೆ

ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…

5 hours ago