Mysore
20
clear sky

Social Media

ಸೋಮವಾರ, 16 ಫೆಬ್ರವರಿ 2026
Light
Dark

ಮಲೆ ಮಹದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ

Unnatural Deaths of 4 Tigers: Minister Eshwar Khandre Orders Investigation

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಹುಲಿಗಳ ಸಂತತಿ ಹೆಚ್ಚಳವಾಗುತ್ತಿದ್ದು, ಈ ಕಾನನ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಿಸಲು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಅರಣ್ಯ ಪಡೆ ಮುಖ್ಯಸ್ಥರು, ಮುಖ್ಯ ವನ್ಯಜೀವಿ ಪರಿಪಾಲಕರು ಸೇರಿದಂತೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಎಂ.ಎಂ.ಹಿಲ್ಸ್ ಹುಲಿ ಸಂರಕ್ಷಿತ ಪ್ರದೇಶ ಘೋಷಣೆ ಮಾಡಲು ಕ್ರಮ ವಹಿಸುವಂತೆ ಹಾಗೂ ಎಲ್ಲರನ್ನು ಸಭೆ ಕರೆದು ಚರ್ಚಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ರಾಜ್ಯದಲ್ಲಿ ವನ್ಯಜೀವಿಗಳ ಅಸಹಜ ಸಾವನ್ನು ನಿಯಂತ್ರಿಸಲು ಮತ್ತು ವನ್ಯ ಮೃಗಗಳ ದಾಳಿಯಿಂದ ಅಮೂಲ್ಯ ಜೀವಹಾನಿ ಆಗುವುದನ್ನು ತಡೆಯಲು ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ, ಆಯಾ ವಲಯದಲ್ಲಿ ಅಧಿಕಾರಿ, ಸಿಬ್ಬಂದಿಗೆ ಹೊಣೆಗಾರಿಕೆ ನಿಗದಿಪಡಿಸುವಂತೆ ನಿರ್ದೇಶನ ನೀಡಿದರು.

Tags:
error: Content is protected !!