ಬೆಂಗಳೂರು : ರಾಮನಗರ ಜಿಲ್ಲೆ ಬಿಡದಿ ಬಳಿಯಿರುವ ವೆಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್ ಟೈನ್ಮೆಂಟ್ ಪ್ರೈ. ಲಿ. (ಜಾಲಿ ವುಡ್ ಸ್ಟುಡಿಯೋ)ಗೆ ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಇದನ್ನು ಓದಿ : ಬಿಗ್ ಬಾಸ್ಗೆ ಶಾಕ್ ಮೇಲೆ ಶಾಕ್: ಬಂದ್ ಆಗುತ್ತಾ ಬಿಗ್ ಬಾಸ್ ಸೀಸನ್-12?
ವಿಕಾಸಸೌಧದಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿರುವ ಸ್ಟುಡಿಯೋಗೆ ನೋಟಿಸ್ ನೀಡಿರುವ ವಿಚಾರ ಮಾಧ್ಯಮದಿಂದ ತಮಗೆ ತಿಳಿಯಿತು. ಈ ಬಗ್ಗೆ ಮಾಹಿತಿ ಪಡೆದಾಗ, ರಾಮನಗರ ಪ್ರಾದೇಶಿಕ ಕಚೇರಿಯಿಂದ 2024ರಲ್ಲೇ 2 ಬಾರಿ ನೋಟಿಸ್ ನೀಡಿದ್ದರೂ ಅನುಪಾಲನೆ ಮಾಡಿದ ಕಾರಣ ಈ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು.
ಇಲ್ಲಿ ಎಸ್.ಟಿ.ಪಿ. ಕಾರ್ಯನಿರ್ವಹಣೆ ಸೇರಿದಂತೆ ಸಮರ್ಪಕವಾಗಿ ತಾಜ್ಯ ವಿಲೇವಾರಿ ಆಗುತ್ತಿಲ್ಲ, ಜನರೇಟರ್ ಸೆಟ್ ಗಳಿದ್ದು ಅದಕ್ಕೂ ಅನುಮತಿ ಪಡೆದಿಲ್ಲ ಎಂದು ತಿಳಿಸಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಹೀಗಾಗಿ ಮಂಡಳಿ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…
ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ…
ಮೂವರು ಕನ್ನಡಿಗರಿವರು ; ಮಂಡ್ಯದ ಅಂಕೇಗೌಡ, ದಾವಣಗೆರೆಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಎಸ್.ಜಿ. ಸುಶೀಲಮ್ಮ ಬೆಂಗಳೂರು : ದೇಶದ…
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…
ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…