ರಾಜ್ಯ

ಬಿಗ್ ಬಾಸ್ ಮನೆಗೆ ನೋಟಿಸ್ ನೀಡಲಾಗಿದೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಮನಗರ ಜಿಲ್ಲೆ ಬಿಡದಿ ಬಳಿಯಿರುವ ವೆಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್ ಟೈನ್ಮೆಂಟ್ ಪ್ರೈ. ಲಿ. (ಜಾಲಿ ವುಡ್ ಸ್ಟುಡಿಯೋ)ಗೆ ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಇದನ್ನು ಓದಿ : ಬಿಗ್‌ ಬಾಸ್‌ಗೆ ಶಾಕ್‌ ಮೇಲೆ ಶಾಕ್:‌ ಬಂದ್‌ ಆಗುತ್ತಾ ಬಿಗ್‌ ಬಾಸ್‌ ಸೀಸನ್‌-12?

ವಿಕಾಸಸೌಧದಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿರುವ ಸ್ಟುಡಿಯೋಗೆ ನೋಟಿಸ್ ನೀಡಿರುವ ವಿಚಾರ ಮಾಧ್ಯಮದಿಂದ ತಮಗೆ ತಿಳಿಯಿತು. ಈ ಬಗ್ಗೆ ಮಾಹಿತಿ ಪಡೆದಾಗ, ರಾಮನಗರ ಪ್ರಾದೇಶಿಕ ಕಚೇರಿಯಿಂದ 2024ರಲ್ಲೇ 2 ಬಾರಿ ನೋಟಿಸ್ ನೀಡಿದ್ದರೂ ಅನುಪಾಲನೆ ಮಾಡಿದ ಕಾರಣ ಈ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ಇಲ್ಲಿ ಎಸ್.ಟಿ.ಪಿ. ಕಾರ್ಯನಿರ್ವಹಣೆ ಸೇರಿದಂತೆ ಸಮರ್ಪಕವಾಗಿ ತಾಜ್ಯ ವಿಲೇವಾರಿ ಆಗುತ್ತಿಲ್ಲ, ಜನರೇಟರ್ ಸೆಟ್ ಗಳಿದ್ದು ಅದಕ್ಕೂ ಅನುಮತಿ ಪಡೆದಿಲ್ಲ ಎಂದು ತಿಳಿಸಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಹೀಗಾಗಿ ಮಂಡಳಿ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

1 hour ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

18 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

18 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

20 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

23 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

23 hours ago