ರಾಜ್ಯ

ಬಿಗ್ ಬಾಸ್ ಮನೆಗೆ ನೋಟಿಸ್ ನೀಡಲಾಗಿದೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಮನಗರ ಜಿಲ್ಲೆ ಬಿಡದಿ ಬಳಿಯಿರುವ ವೆಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್ ಟೈನ್ಮೆಂಟ್ ಪ್ರೈ. ಲಿ. (ಜಾಲಿ ವುಡ್ ಸ್ಟುಡಿಯೋ)ಗೆ ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಇದನ್ನು ಓದಿ : ಬಿಗ್‌ ಬಾಸ್‌ಗೆ ಶಾಕ್‌ ಮೇಲೆ ಶಾಕ್:‌ ಬಂದ್‌ ಆಗುತ್ತಾ ಬಿಗ್‌ ಬಾಸ್‌ ಸೀಸನ್‌-12?

ವಿಕಾಸಸೌಧದಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿರುವ ಸ್ಟುಡಿಯೋಗೆ ನೋಟಿಸ್ ನೀಡಿರುವ ವಿಚಾರ ಮಾಧ್ಯಮದಿಂದ ತಮಗೆ ತಿಳಿಯಿತು. ಈ ಬಗ್ಗೆ ಮಾಹಿತಿ ಪಡೆದಾಗ, ರಾಮನಗರ ಪ್ರಾದೇಶಿಕ ಕಚೇರಿಯಿಂದ 2024ರಲ್ಲೇ 2 ಬಾರಿ ನೋಟಿಸ್ ನೀಡಿದ್ದರೂ ಅನುಪಾಲನೆ ಮಾಡಿದ ಕಾರಣ ಈ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ಇಲ್ಲಿ ಎಸ್.ಟಿ.ಪಿ. ಕಾರ್ಯನಿರ್ವಹಣೆ ಸೇರಿದಂತೆ ಸಮರ್ಪಕವಾಗಿ ತಾಜ್ಯ ವಿಲೇವಾರಿ ಆಗುತ್ತಿಲ್ಲ, ಜನರೇಟರ್ ಸೆಟ್ ಗಳಿದ್ದು ಅದಕ್ಕೂ ಅನುಮತಿ ಪಡೆದಿಲ್ಲ ಎಂದು ತಿಳಿಸಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಹೀಗಾಗಿ ಮಂಡಳಿ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

1 hour ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

10 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

10 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

10 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

10 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

10 hours ago