ಬೆಂಗಳೂರು: ಬಿಜೆಪಿ ಹೈಕಮಾಂಡ್ ಶಿಸ್ತು ಸಮಿತಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎರಡನೇ ಬಾರಿ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ರಾಜ್ಯ ಬಿಜೆಪಿಯಲ್ಲಿ ಬಣಗಳ ಬಡಿದಾಟ ಜೋರಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆ ಮುನ್ನವೇ ಬಿಜೆಪಿ ಹೈಕಮಾಂಡ್ ಇಂದು(ಫೆಬ್ರವರಿ.10) ಯತ್ನಾಳ್ ಅವರಿಗೆ ಕೇಂದ್ರ ಶಿಸ್ತು ಸಮಿತಿಯಿಂದ ಎರಡನೇ ಬಾರಿಗೆ ಶೋಕಾಸ್ ನೋಟಿಸ್ ನೀಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅನಗತ್ಯವಾಗಿ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದರು. ಹೀಗಾಗಿ ಬಿಜೆಪಿ ಹೈಕಮಾಂಡ್ ಸೂಚನೆಯಿಂದ ಬಿಜೆಪಿ ಶಿಸ್ತು ಸಮಿತಿಯು ಶಾಸಕ ಯತ್ನಾಳ್ಗೆ ನೋಟಿಸ್ ನೀಡಿದ್ದು, ಈ ನೋಟಿಸ್ನಿಂದ ಶಾಸಕ ಯತ್ನಾಳ್ ಬಣಕ್ಕೆ ಬಿಗ್ ಶಾಕ್ ಕೊಟ್ಟಿದೆ.
ಇನ್ನು ಈ ಹಿಂದೆ ನೋಟಿಸ್ ನೀಡಿದ್ರೂ ಮತ್ತೆ ಪಕ್ಷದ ಶಿಸ್ತು ಉಲ್ಲಂಘನೆ ಹಿನ್ನೆಲೆ ಮತ್ತೊಂದು ಶೋಕಸ್ ನೋಟಿಸ್ ನೀಡಲಾಗಿದೆ . ನಿಗದಿತ ಕಾಲಮಿತಿಯೊಳಗೆ ಉತ್ತರ ನೀಡದಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶೋಕಾಸ್ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…