ಬೆಂಗಳೂರು: ಬಿಜೆಪಿ ಹೈಕಮಾಂಡ್ ಶಿಸ್ತು ಸಮಿತಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎರಡನೇ ಬಾರಿ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ರಾಜ್ಯ ಬಿಜೆಪಿಯಲ್ಲಿ ಬಣಗಳ ಬಡಿದಾಟ ಜೋರಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆ ಮುನ್ನವೇ ಬಿಜೆಪಿ ಹೈಕಮಾಂಡ್ ಇಂದು(ಫೆಬ್ರವರಿ.10) ಯತ್ನಾಳ್ ಅವರಿಗೆ ಕೇಂದ್ರ ಶಿಸ್ತು ಸಮಿತಿಯಿಂದ ಎರಡನೇ ಬಾರಿಗೆ ಶೋಕಾಸ್ ನೋಟಿಸ್ ನೀಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅನಗತ್ಯವಾಗಿ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದರು. ಹೀಗಾಗಿ ಬಿಜೆಪಿ ಹೈಕಮಾಂಡ್ ಸೂಚನೆಯಿಂದ ಬಿಜೆಪಿ ಶಿಸ್ತು ಸಮಿತಿಯು ಶಾಸಕ ಯತ್ನಾಳ್ಗೆ ನೋಟಿಸ್ ನೀಡಿದ್ದು, ಈ ನೋಟಿಸ್ನಿಂದ ಶಾಸಕ ಯತ್ನಾಳ್ ಬಣಕ್ಕೆ ಬಿಗ್ ಶಾಕ್ ಕೊಟ್ಟಿದೆ.
ಇನ್ನು ಈ ಹಿಂದೆ ನೋಟಿಸ್ ನೀಡಿದ್ರೂ ಮತ್ತೆ ಪಕ್ಷದ ಶಿಸ್ತು ಉಲ್ಲಂಘನೆ ಹಿನ್ನೆಲೆ ಮತ್ತೊಂದು ಶೋಕಸ್ ನೋಟಿಸ್ ನೀಡಲಾಗಿದೆ . ನಿಗದಿತ ಕಾಲಮಿತಿಯೊಳಗೆ ಉತ್ತರ ನೀಡದಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶೋಕಾಸ್ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…