ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹಸುಗಳ ಮೇಲೆ ಕಿಡಿಗೇಡಿಗಳ ಕ್ರೌರ್ಯ ಹೆಚ್ಚಾಗುತ್ತಿದ್ದು, ಕ್ರೌರ್ಯ ಎಸಗುತ್ತಿರುವ ವ್ಯಕ್ತಿಗಳ ಹಿನ್ನೆಲೆ ಪರಿಶೀಲನೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಇಂತಹ ಘಟನೆ ಆಗದಂತೆ ಏನಾದರೂ ಉಪಾಯ ಕಂಡು ಹಿಡಿಯಬೇಕಾಗಿದೆ.
ಈ ಪ್ರಕರಣಗಳ ಕುರಿತು ಇಂದು ಬೆಳಿಗ್ಗೆ ಹಿರಿಯ ಅಧಿಕಾರಿಗಳ ಜೊತೆ ಗಂಭೀರವಾಗಿ ಚರ್ಚೆ ಮಾಡಿದ್ದೇನೆ. ಯಾರು ಈ ರೀತಿಯ ಮನಸ್ಥಿತಿಯವರು ಇದ್ದಾರೋ ಅಂತಹವರನ್ನು ಪತ್ತೆ ಹಚ್ಚಬೇಕು. ಇಂತಹ ಕೃತ್ಯಗಳು ಸಂಘಟನೆಯಿಂದ ಮಾಡ್ತಾ ಇರೋದಾ? ಅಥವಾ ಏಕಾಂಗಿಯಾಗಿ ಮಾಡಿರೋದಾ? ಯಾರ ಪ್ರಚೋದನೆಯಿಂದ ಆಗ್ತಿದೆಯಾ? ಎಂದು ತನಿಖೆಗೆ ಸೂಚನೆ ನೀಡಿದ್ದೇನೆ. ಇದರ ಬಗ್ಗೆ ಪರಿಶೀಲನೆ ಮಾಡಿ ಇದಕ್ಕೆ ಕಡಿವಾಣ ಹಾಕುವ ಕೆಲಸ ಮಾಡ್ತೀವಿ ಎಂದು ತಿಳಿಸಿದರು.
ಇನ್ನು ಸೆಂಟ್ರಲ್ ಜೈಲು ವಿಭಜನೆ ಕುರಿತು ಮಾತನಾಡಿದ ಅವರು, ವಿಭಜನೆ ಮಾಡುವ ಪ್ರಸ್ತಾಪ ಸದ್ಯ ಸರ್ಕಾರದ ಮುಂದೆ ಇಲ್ಲ. ಆದರೆ ಬಂಧಿಖಾನೆಗಳನ್ನು ಬಿಗಿ ಮಾಡಬೇಕು ಎಂದು ನಿರ್ಧಾರ ಮಾಡಿದ್ದೇವೆ. ಸೆಕ್ಯುರಿಟಿಯನ್ನು ಮತ್ತಷ್ಟು ಜಾಸ್ತಿ ಮಾಡಬೇಕು ಎಂದು ನಿರ್ಧಾರ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…