ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹಸುಗಳ ಮೇಲೆ ಕಿಡಿಗೇಡಿಗಳ ಕ್ರೌರ್ಯ ಹೆಚ್ಚಾಗುತ್ತಿದ್ದು, ಕ್ರೌರ್ಯ ಎಸಗುತ್ತಿರುವ ವ್ಯಕ್ತಿಗಳ ಹಿನ್ನೆಲೆ ಪರಿಶೀಲನೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಇಂತಹ ಘಟನೆ ಆಗದಂತೆ ಏನಾದರೂ ಉಪಾಯ ಕಂಡು ಹಿಡಿಯಬೇಕಾಗಿದೆ.
ಈ ಪ್ರಕರಣಗಳ ಕುರಿತು ಇಂದು ಬೆಳಿಗ್ಗೆ ಹಿರಿಯ ಅಧಿಕಾರಿಗಳ ಜೊತೆ ಗಂಭೀರವಾಗಿ ಚರ್ಚೆ ಮಾಡಿದ್ದೇನೆ. ಯಾರು ಈ ರೀತಿಯ ಮನಸ್ಥಿತಿಯವರು ಇದ್ದಾರೋ ಅಂತಹವರನ್ನು ಪತ್ತೆ ಹಚ್ಚಬೇಕು. ಇಂತಹ ಕೃತ್ಯಗಳು ಸಂಘಟನೆಯಿಂದ ಮಾಡ್ತಾ ಇರೋದಾ? ಅಥವಾ ಏಕಾಂಗಿಯಾಗಿ ಮಾಡಿರೋದಾ? ಯಾರ ಪ್ರಚೋದನೆಯಿಂದ ಆಗ್ತಿದೆಯಾ? ಎಂದು ತನಿಖೆಗೆ ಸೂಚನೆ ನೀಡಿದ್ದೇನೆ. ಇದರ ಬಗ್ಗೆ ಪರಿಶೀಲನೆ ಮಾಡಿ ಇದಕ್ಕೆ ಕಡಿವಾಣ ಹಾಕುವ ಕೆಲಸ ಮಾಡ್ತೀವಿ ಎಂದು ತಿಳಿಸಿದರು.
ಇನ್ನು ಸೆಂಟ್ರಲ್ ಜೈಲು ವಿಭಜನೆ ಕುರಿತು ಮಾತನಾಡಿದ ಅವರು, ವಿಭಜನೆ ಮಾಡುವ ಪ್ರಸ್ತಾಪ ಸದ್ಯ ಸರ್ಕಾರದ ಮುಂದೆ ಇಲ್ಲ. ಆದರೆ ಬಂಧಿಖಾನೆಗಳನ್ನು ಬಿಗಿ ಮಾಡಬೇಕು ಎಂದು ನಿರ್ಧಾರ ಮಾಡಿದ್ದೇವೆ. ಸೆಕ್ಯುರಿಟಿಯನ್ನು ಮತ್ತಷ್ಟು ಜಾಸ್ತಿ ಮಾಡಬೇಕು ಎಂದು ನಿರ್ಧಾರ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…