DK Shivakumar
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ನೋಟಿಸ್ ನೀಡಲು ಅಧಿಕಾರವಿದೆಯೇ ಹೊರತು ಅವರಿಗೆ ಇಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಯುತವಾಗಿ ಚುನಾವಣೆ ಗೆದ್ದಿದ್ದೇವೆ. ನ್ಯಾಯಯುತವಾಗಿ ಚುನಾವಣೆ ನಡೆಸಲು ಅವರಿಗೆ ಅವಕಾಶವಿದೆಯೇ ಹೊರತು ನೋಟಿಸ್ ನೀಡುವ ಹಕ್ಕಿಲ್ಲ. ಏನಿದ್ದರೂ ಕಾನೂನಾತ್ಮಕವಾಗಿ ಉತ್ತರ ನೀಡುತ್ತೇವೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯಲ್ಲಿ ಕೆಲವು ಖಾಲಿ ಟ್ರಂಕುಗಳಿವೆ. ಬರೀ ಶಬ್ಧ ಮಾಡುವವರಿಗೂ ನಾನು ಎಲ್ಲಾ ಮಾಹಿತಿ ತಿಳಿಸಿಕೊಡುತ್ತಿದ್ದೇನೆ. ಏಕೆಂದರೆ ಇದುವರೆಗೂ ಯಾರೊಬ್ಬರು ಅನುದಾನ ತಂದಿಲ್ಲ. ತರಲು ಆಸಕ್ತಿಯನ್ನೂ ತೋರಿಲ್ಲ ಎಂದು ಬಿಜೆಪಿ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ಮಾತನಾಡಿದೆ. ಅವರು ನಮ್ಮ ಮನವಿಯನ್ನು ಗಮನಿಸುವುದಾಗಿ ಹೇಳಿದ್ದಾರೆ. ಬೆಂಗಳೂರು ಜಾಗತಿಕ ನಗರ ಎನ್ನುವುದನ್ನು ಅವರು ಒಪ್ಪಿಕೊಂಡಿದ್ದಾರೆ. ಆದ್ದರಿಂದಲೇ ಅವರು ಬೆಂಗಳೂರು ಭಾರತವನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದ್ದಾರೆ ಎಂದರು.
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…
ಟೆಹರಾನ್: ಕಳೆದ ಕೆಲ ದಿನಗಳಿಂದ ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್…
ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…
ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…