DK Shivakumar
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ನೋಟಿಸ್ ನೀಡಲು ಅಧಿಕಾರವಿದೆಯೇ ಹೊರತು ಅವರಿಗೆ ಇಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಯುತವಾಗಿ ಚುನಾವಣೆ ಗೆದ್ದಿದ್ದೇವೆ. ನ್ಯಾಯಯುತವಾಗಿ ಚುನಾವಣೆ ನಡೆಸಲು ಅವರಿಗೆ ಅವಕಾಶವಿದೆಯೇ ಹೊರತು ನೋಟಿಸ್ ನೀಡುವ ಹಕ್ಕಿಲ್ಲ. ಏನಿದ್ದರೂ ಕಾನೂನಾತ್ಮಕವಾಗಿ ಉತ್ತರ ನೀಡುತ್ತೇವೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯಲ್ಲಿ ಕೆಲವು ಖಾಲಿ ಟ್ರಂಕುಗಳಿವೆ. ಬರೀ ಶಬ್ಧ ಮಾಡುವವರಿಗೂ ನಾನು ಎಲ್ಲಾ ಮಾಹಿತಿ ತಿಳಿಸಿಕೊಡುತ್ತಿದ್ದೇನೆ. ಏಕೆಂದರೆ ಇದುವರೆಗೂ ಯಾರೊಬ್ಬರು ಅನುದಾನ ತಂದಿಲ್ಲ. ತರಲು ಆಸಕ್ತಿಯನ್ನೂ ತೋರಿಲ್ಲ ಎಂದು ಬಿಜೆಪಿ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ಮಾತನಾಡಿದೆ. ಅವರು ನಮ್ಮ ಮನವಿಯನ್ನು ಗಮನಿಸುವುದಾಗಿ ಹೇಳಿದ್ದಾರೆ. ಬೆಂಗಳೂರು ಜಾಗತಿಕ ನಗರ ಎನ್ನುವುದನ್ನು ಅವರು ಒಪ್ಪಿಕೊಂಡಿದ್ದಾರೆ. ಆದ್ದರಿಂದಲೇ ಅವರು ಬೆಂಗಳೂರು ಭಾರತವನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದ್ದಾರೆ ಎಂದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…