ದಾವಣಗೆರೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಕೇಂದ್ರೀಯ ಶಿಸ್ತು ಸಮಿತಿಯು ನೀಡಿರುವ ಶೋಕಾಸ್ ನೋಟಿಸ್ ಬಗ್ಗೆ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯಿಸಿ, ನೋಟಿಸ್ ನೀಡಿರುವುದಕ್ಕೆ ನನಗೆ ನೋವು ಇಲ್ಲ ಹಾಗೆಯೇ ಖುಷಿನೂ ಇಲ್ಲ ಎಂದಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕತ್ವದ ವಿರೋಧಿ ಹೇಳಿಕೆಗಳು ಪಕ್ಷದ ವರ್ಚಸ್ಸಿಗೆ ಹಾನಿಮಾಡುತ್ತವೆ. ಇಂತಹ ಹೇಳಿಕೆ ನೀಡುವಲ್ಲಿ ಯತ್ನಾಳ್ ಟೀಮ್ ತೊಡಗಿದೆ. ತಾವು ಹಿರಿಯರು ಎನ್ನುವುದನ್ನು ಮರೆತು ವಿಜಯೇಂದ್ರ ಚಿಕ್ಕವರು ಎಂದು ನಿಂದಿಸಿದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.
ಯತ್ನಾಳ್ ನಮ್ಮ ಮೇಲೆ ಹೊಂದಾಣಿಕೆ ರಾಜಕಾರಣದ ಆರೋಪ ಮಾಡುತ್ತಿದ್ದಾರೆ. ನನ್ನಿಂದಲೇ ಎಲ್ಲಾ ಎನ್ನುವ ಮನೋಭಾವ ಒಳ್ಳೆಯದಲ್ಲ. ಪಕ್ಷದ ಅಧ್ಯಕ್ಷರು ಚಿಕ್ಕವರೇ ಆಗಿದ್ದರೂ ರಾಜ್ಯ ರಾಜಕೀಯದ ಆಡಳಿತದಲ್ಲಿ ಮುಖ್ಯವಾಗುತ್ತಾರೆ. ಹಿರಿತನದ ಮೇಲೆ ಚಿಕ್ಕವರನ್ನು ನಿಂದಿಸಬಾರದು, ಕೇಂದ್ರದ ನಾಯಕರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದರು.
ವಿಜಯೇಂದ್ರ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಪ್ರಧಾನಿ ಮೋದಿರನ್ನೂ ಭೇಟಿಯಾಗಿದ್ದರು. ಹಾಗಂತ ಅವರ ಮಧ್ಯೆ ಹೊಂದಾಣಿಕೆಯಿದೆ ಎಂದು ಹೇಳಿದರೆ ಹೇಗೆ? ರಾಜ್ಯದ ಅಭಿವೃದ್ದಿ ವಿಷಯವಾಗಿ ಚರ್ಚಿಸಿರಬಹುದು. ಏನೇ ಭಿನ್ನಮತ ಇದ್ದರೂ ಪಕ್ಷದ ಒಳಗೆ ಸರಿಪಡಿಸಿಕೊಂಡರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…
ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…