ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಹೈಕಮಾಂಡ್ ನೋಟಿಸ್ ನೀಡಿದೆ.
ಈ ಕುರಿತು ಯತ್ನಾಳ್ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ನೋಟಿಸ್ ಹೊರಡಿಸಲಾಗಿದೆ. ಈ ಮೂಲಕ ಕೊನೆಗೂ ಹೈಕಮಾಂಡ್ ಮಧ್ಯಪ್ರವೇಶಿಸಿ ರಾಜ್ಯಾದ್ಯಾಂತ ನಡೆಯುತ್ತಿರುವ ಬಿಜೆಪಿ v/s ಬಿಜೆಪಿ ಬಣಗಳ ಭಿನ್ನಮತ ಗುದ್ದಾಟಕ್ಕೆ ತೆರೆ ಎಳೆಯಲು ನಿರ್ಧರಿಸಿದೆ.
ಶಾಸಕ ಯತ್ನಾಳ್ ಬಣ ಅವರ ಬಣ ವಕ್ಫ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಪದಚ್ಯುತಿಗೆ ಒತ್ತಾಯಿಸಿದ್ದರು. ಆದರೆ ವಿಜಯೇಂದ್ರ ಬಣ ಯತ್ನಾಳ್ ವಿರುದ್ಧ ಕಿಡಿಕಾರಿದ್ದು, ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಹಾಗೂ ಹೈಕಮಾಂಡ್ ನಾಯಕರಿಗೆ ಮನವಿ ಮಾಡಿದ್ದರು. ಆದರೆ ಇದೀಗ ಬಿಜೆಪಿ ಹೈಕಮಾಂಡ್ ಮಧ್ಯಪ್ರವೇಶಿಸಿ ಬಣಗಳ ಜಿದ್ದಾ-ಜಿದ್ದಿ ಹೋರಾಟಕ್ಕೆ ತೆರೆ ಎಳೆಯಲು ತೀರ್ಮಾನಿಸಿದ್ದು, ಬಿಜೆಪಿ ನಾಯಕರನ್ನು ಒಂದುಗೂಡಿಸಲು ಪ್ರಯತ್ನಿಸುತ್ತಿದೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…