DCM DK Shivakumar
ಬೆಂಗಳೂರು: ಪಕ್ಷದಲ್ಲಿ ಯಾರೇ ಶಿಸ್ತು ಕ್ರಮ ಉಲ್ಲಂಘಿಸಿದರೂ ನೋಟಿಸ್ ಕೊಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು ಗಮನಿಸಲು ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದರು.
ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಬಳಿ ಶಾಸಕರು ಅಸಮಾಧಾನ ಹೇಳಿಕೊಂಡಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗಿನಿಂದಲೇ ಮುಂಬರುವ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂಬುದು ಸೇರಿದಂತೆ, ಜವಾಬ್ದಾರಿಗಳ ನಿರ್ವಹಣೆ ಹೇಗೆ ಮಾಡಬೇಕು ಎಂದು ಚರ್ಚೆ ನಡೆಸಲು ಜವಾಬ್ದಾರಿ ವಹಿಸಲು ಸುರ್ಜೇವಾಲಾ ಅವರು ಬಂದಿದ್ದಾರೆ ಎಂದು ಹೇಳಿದರು.
ಇನ್ನು ಪಕ್ಷದಲ್ಲಿ ಶಿಸ್ತು ಮುಖ್ಯ. ಇಕ್ಬಾಲ್ ಹುಸೇನ್ ಅವರಿಗೂ ನೋಟಿಸ್ ನೀಡುವೆ. ಬೇರೆಯವರಿಗೂ ನೋಟಿಸ್ ನೀಡಬೇಕಾಗುತ್ತದೆ. ನನ್ನ ಹೆಸರು ಹೇಳಿ, ನನ್ನನ್ನು ಸಿಎಂ ಮಾಡಿ ಎಂದು ಹೇಳುವ ಅವಶ್ಯಕತೆಯಿಲ್ಲ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇರುವಾಗ ಬೇರೆ ಹೆಸರು ಹೇಳುವುದು ಯಾಕೆ? ಎಂದು ಪ್ರಶ್ನೆ ಮಾಡಿದರು.
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…