DCM DK Shivakumar
ಬೆಂಗಳೂರು: ಪಕ್ಷದಲ್ಲಿ ಯಾರೇ ಶಿಸ್ತು ಕ್ರಮ ಉಲ್ಲಂಘಿಸಿದರೂ ನೋಟಿಸ್ ಕೊಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು ಗಮನಿಸಲು ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದರು.
ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಬಳಿ ಶಾಸಕರು ಅಸಮಾಧಾನ ಹೇಳಿಕೊಂಡಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗಿನಿಂದಲೇ ಮುಂಬರುವ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂಬುದು ಸೇರಿದಂತೆ, ಜವಾಬ್ದಾರಿಗಳ ನಿರ್ವಹಣೆ ಹೇಗೆ ಮಾಡಬೇಕು ಎಂದು ಚರ್ಚೆ ನಡೆಸಲು ಜವಾಬ್ದಾರಿ ವಹಿಸಲು ಸುರ್ಜೇವಾಲಾ ಅವರು ಬಂದಿದ್ದಾರೆ ಎಂದು ಹೇಳಿದರು.
ಇನ್ನು ಪಕ್ಷದಲ್ಲಿ ಶಿಸ್ತು ಮುಖ್ಯ. ಇಕ್ಬಾಲ್ ಹುಸೇನ್ ಅವರಿಗೂ ನೋಟಿಸ್ ನೀಡುವೆ. ಬೇರೆಯವರಿಗೂ ನೋಟಿಸ್ ನೀಡಬೇಕಾಗುತ್ತದೆ. ನನ್ನ ಹೆಸರು ಹೇಳಿ, ನನ್ನನ್ನು ಸಿಎಂ ಮಾಡಿ ಎಂದು ಹೇಳುವ ಅವಶ್ಯಕತೆಯಿಲ್ಲ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇರುವಾಗ ಬೇರೆ ಹೆಸರು ಹೇಳುವುದು ಯಾಕೆ? ಎಂದು ಪ್ರಶ್ನೆ ಮಾಡಿದರು.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…