DCM DK Shivakumar
ಬೆಂಗಳೂರು: ಪಕ್ಷದಲ್ಲಿ ಯಾರೇ ಶಿಸ್ತು ಕ್ರಮ ಉಲ್ಲಂಘಿಸಿದರೂ ನೋಟಿಸ್ ಕೊಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು ಗಮನಿಸಲು ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದರು.
ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಬಳಿ ಶಾಸಕರು ಅಸಮಾಧಾನ ಹೇಳಿಕೊಂಡಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗಿನಿಂದಲೇ ಮುಂಬರುವ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂಬುದು ಸೇರಿದಂತೆ, ಜವಾಬ್ದಾರಿಗಳ ನಿರ್ವಹಣೆ ಹೇಗೆ ಮಾಡಬೇಕು ಎಂದು ಚರ್ಚೆ ನಡೆಸಲು ಜವಾಬ್ದಾರಿ ವಹಿಸಲು ಸುರ್ಜೇವಾಲಾ ಅವರು ಬಂದಿದ್ದಾರೆ ಎಂದು ಹೇಳಿದರು.
ಇನ್ನು ಪಕ್ಷದಲ್ಲಿ ಶಿಸ್ತು ಮುಖ್ಯ. ಇಕ್ಬಾಲ್ ಹುಸೇನ್ ಅವರಿಗೂ ನೋಟಿಸ್ ನೀಡುವೆ. ಬೇರೆಯವರಿಗೂ ನೋಟಿಸ್ ನೀಡಬೇಕಾಗುತ್ತದೆ. ನನ್ನ ಹೆಸರು ಹೇಳಿ, ನನ್ನನ್ನು ಸಿಎಂ ಮಾಡಿ ಎಂದು ಹೇಳುವ ಅವಶ್ಯಕತೆಯಿಲ್ಲ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇರುವಾಗ ಬೇರೆ ಹೆಸರು ಹೇಳುವುದು ಯಾಕೆ? ಎಂದು ಪ್ರಶ್ನೆ ಮಾಡಿದರು.
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…