DCM DK Shivakumar
ಬೆಂಗಳೂರು: ಪಕ್ಷದಲ್ಲಿ ಯಾರೇ ಶಿಸ್ತು ಕ್ರಮ ಉಲ್ಲಂಘಿಸಿದರೂ ನೋಟಿಸ್ ಕೊಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು ಗಮನಿಸಲು ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದರು.
ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಬಳಿ ಶಾಸಕರು ಅಸಮಾಧಾನ ಹೇಳಿಕೊಂಡಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗಿನಿಂದಲೇ ಮುಂಬರುವ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂಬುದು ಸೇರಿದಂತೆ, ಜವಾಬ್ದಾರಿಗಳ ನಿರ್ವಹಣೆ ಹೇಗೆ ಮಾಡಬೇಕು ಎಂದು ಚರ್ಚೆ ನಡೆಸಲು ಜವಾಬ್ದಾರಿ ವಹಿಸಲು ಸುರ್ಜೇವಾಲಾ ಅವರು ಬಂದಿದ್ದಾರೆ ಎಂದು ಹೇಳಿದರು.
ಇನ್ನು ಪಕ್ಷದಲ್ಲಿ ಶಿಸ್ತು ಮುಖ್ಯ. ಇಕ್ಬಾಲ್ ಹುಸೇನ್ ಅವರಿಗೂ ನೋಟಿಸ್ ನೀಡುವೆ. ಬೇರೆಯವರಿಗೂ ನೋಟಿಸ್ ನೀಡಬೇಕಾಗುತ್ತದೆ. ನನ್ನ ಹೆಸರು ಹೇಳಿ, ನನ್ನನ್ನು ಸಿಎಂ ಮಾಡಿ ಎಂದು ಹೇಳುವ ಅವಶ್ಯಕತೆಯಿಲ್ಲ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇರುವಾಗ ಬೇರೆ ಹೆಸರು ಹೇಳುವುದು ಯಾಕೆ? ಎಂದು ಪ್ರಶ್ನೆ ಮಾಡಿದರು.
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…