DCM DK Shivakumar
ಬೆಂಗಳೂರು: ಪಕ್ಷದಲ್ಲಿ ಯಾರೇ ಶಿಸ್ತು ಕ್ರಮ ಉಲ್ಲಂಘಿಸಿದರೂ ನೋಟಿಸ್ ಕೊಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು ಗಮನಿಸಲು ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದರು.
ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಬಳಿ ಶಾಸಕರು ಅಸಮಾಧಾನ ಹೇಳಿಕೊಂಡಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗಿನಿಂದಲೇ ಮುಂಬರುವ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂಬುದು ಸೇರಿದಂತೆ, ಜವಾಬ್ದಾರಿಗಳ ನಿರ್ವಹಣೆ ಹೇಗೆ ಮಾಡಬೇಕು ಎಂದು ಚರ್ಚೆ ನಡೆಸಲು ಜವಾಬ್ದಾರಿ ವಹಿಸಲು ಸುರ್ಜೇವಾಲಾ ಅವರು ಬಂದಿದ್ದಾರೆ ಎಂದು ಹೇಳಿದರು.
ಇನ್ನು ಪಕ್ಷದಲ್ಲಿ ಶಿಸ್ತು ಮುಖ್ಯ. ಇಕ್ಬಾಲ್ ಹುಸೇನ್ ಅವರಿಗೂ ನೋಟಿಸ್ ನೀಡುವೆ. ಬೇರೆಯವರಿಗೂ ನೋಟಿಸ್ ನೀಡಬೇಕಾಗುತ್ತದೆ. ನನ್ನ ಹೆಸರು ಹೇಳಿ, ನನ್ನನ್ನು ಸಿಎಂ ಮಾಡಿ ಎಂದು ಹೇಳುವ ಅವಶ್ಯಕತೆಯಿಲ್ಲ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇರುವಾಗ ಬೇರೆ ಹೆಸರು ಹೇಳುವುದು ಯಾಕೆ? ಎಂದು ಪ್ರಶ್ನೆ ಮಾಡಿದರು.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…