CM will resolve the MLAs' dissatisfaction: Minister G. Parameshwara
ಬೆಳಗಾವಿ : ಶೀಘ್ರದಲ್ಲೇ 3600 ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್ಗೆ ತಿಳಿಸಿದ್ದಾರೆ.
ಸದಸ್ಯ ಜಗದೇವ್ ಗುತ್ತೆದಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬೇಕೆಂಬ ಉದ್ದೇಶವಿತ್ತು. ಆದರೆ ಎಸ್ಸಿ-ಎಸ್ಟಿ ಒಳಮೀಸಲಾತಿ ವಿವಾದ ಹೈಕೋರ್ಟ್ನಲ್ಲಿದ್ದರಿಂದ ವಿಳಂಬವಾಗಿತ್ತು. ಇದು ಇತ್ಯರ್ಥವಾಗುವವರೆಗೂ ನೇಮಕಾತಿ ಮಾಡಬಾರದೆಂದು ಹೈಕೋರ್ಟ್ ಸೂಚನೆ ನೀಡಿತ್ತು. ಹಾಗಾಗಿ ವಿಳಂಬವಾಗಿದೆ ಎಂಬುದನ್ನು ಒಪ್ಪಿಕೊಂಡರು.
ಬುಧವಾರವಷ್ಟೆ ವಿಧಾನಸಭೆಯಲ್ಲಿ ಎಸ್ಸಿ-ಎಸ್ಟಿ ಒಳಮೀಸಲಾತಿ ಸಂಬಂಧ ವಿಧೇಯಕವನ್ನು ಮಂಡಿಸಿದ್ದೇವೆ. ಈಗ ನಮಗೆ ಯಾವುದೇ ಕಾನೂನು ತೊಡಕು ಎದುರಾಗುವುದಿಲ್ಲ. ೩೬೦೦ ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುತ್ತೇವೆ. ಇದಕ್ಕೆ ಹಣಕಾಸು ಇಲಾಖೆ ಅನುಮತಿ ಕೊಟ್ಟಿದೆ ಎಂದು ತಿಳಿಸಿದರು.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ೧೬೭ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ನಾವು ಪ್ರಣಾಳಿಕೆಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದೆವು. ಅದರಂತೆ ಹಂತ ಹಂತವಾಗಿ ಖಾಲಿ ಇರುವ ಕಡೆ ಭರ್ತಿ ಮಾಡಿಕೊಳ್ಳುತ್ತೇವೆ ಎಂದರು.
ಇದನ್ನೂ ಓದಿ:-ಪ್ರತಿಭಟನೆ ವೇಳೆ ಮಹಿಳಾ ASIನ ಚಿನ್ನದ ಸರ ಎಗರಿಸಿದ ಖದೀಮರು
ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲು ನಮಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಎಸ್ಸಿಎಸ್ಟಿ ಒಳಮೀಸಲಾತಿ ಜಾರಿ ಮಾಡಿದ ಪರಿಣಾಮ ಕೆಲವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದರು. ನ್ಯಾಯಾಲಯವು ಪ್ರಕರಣ ಇತ್ಯರ್ಥ ಆಗುವವರೆಗೂ ನೇಮಕಾತಿ ಬೇಡ ಎಂದು ಆದೇಶ ಮಾಡಿದೆ. ಅದನ್ನು ಮೀರಿ ನಾವು ಹೇಗೆ ನೇಮಕಾತಿ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಕಲಬುರಗಿ ಜಿಲ್ಲೆಯಲ್ಲಿ ೨೮ ಪೊಲೀಸ್ ಠಾಣೆಗಳಿಗೆ ೧೧೨೫ ಹುದ್ದೆಗಳು ಮಂಜೂರಾಗಿದೆ. ಇದರಲ್ಲಿ ೧೨೬ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ೧೪೬ ಖಾಲಿ ಇವೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನಮ ಸರ್ಕಾರ ಪ್ರತಿ ವರ್ಷ ೫ ಸಾವಿರ ಕೋಟಿ ಅನುದಾನ ನೀಡುತ್ತಿದ್ದೇವೆ. ಇದರಲ್ಲಿ ನಮ ಇಲಾಖೆಗೂ ಅನುದಾನ ನೀಡಬೇಕೆಂದು ಮನವಿ ಮಾಡಿದ್ದೆವು. ೫೦ ಕೋಟಿ ಅನುದಾನ ನೀಡಲು ಸೂಚಿಸಿದ್ದಾರೆ. ಇದರಲ್ಲಿ ಎಲ್ಲೆಲ್ಲಿ ಅಗತ್ಯವಿರುತ್ತದೆಯೋ ಅಂಥ ಕಡೆ ಪೊಲೀಸ್ ಠಾಣೆಗಳು, ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…