CM will resolve the MLAs' dissatisfaction: Minister G. Parameshwara
ಬೆಳಗಾವಿ : ಶೀಘ್ರದಲ್ಲೇ 3600 ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್ಗೆ ತಿಳಿಸಿದ್ದಾರೆ.
ಸದಸ್ಯ ಜಗದೇವ್ ಗುತ್ತೆದಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬೇಕೆಂಬ ಉದ್ದೇಶವಿತ್ತು. ಆದರೆ ಎಸ್ಸಿ-ಎಸ್ಟಿ ಒಳಮೀಸಲಾತಿ ವಿವಾದ ಹೈಕೋರ್ಟ್ನಲ್ಲಿದ್ದರಿಂದ ವಿಳಂಬವಾಗಿತ್ತು. ಇದು ಇತ್ಯರ್ಥವಾಗುವವರೆಗೂ ನೇಮಕಾತಿ ಮಾಡಬಾರದೆಂದು ಹೈಕೋರ್ಟ್ ಸೂಚನೆ ನೀಡಿತ್ತು. ಹಾಗಾಗಿ ವಿಳಂಬವಾಗಿದೆ ಎಂಬುದನ್ನು ಒಪ್ಪಿಕೊಂಡರು.
ಬುಧವಾರವಷ್ಟೆ ವಿಧಾನಸಭೆಯಲ್ಲಿ ಎಸ್ಸಿ-ಎಸ್ಟಿ ಒಳಮೀಸಲಾತಿ ಸಂಬಂಧ ವಿಧೇಯಕವನ್ನು ಮಂಡಿಸಿದ್ದೇವೆ. ಈಗ ನಮಗೆ ಯಾವುದೇ ಕಾನೂನು ತೊಡಕು ಎದುರಾಗುವುದಿಲ್ಲ. ೩೬೦೦ ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುತ್ತೇವೆ. ಇದಕ್ಕೆ ಹಣಕಾಸು ಇಲಾಖೆ ಅನುಮತಿ ಕೊಟ್ಟಿದೆ ಎಂದು ತಿಳಿಸಿದರು.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ೧೬೭ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ನಾವು ಪ್ರಣಾಳಿಕೆಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದೆವು. ಅದರಂತೆ ಹಂತ ಹಂತವಾಗಿ ಖಾಲಿ ಇರುವ ಕಡೆ ಭರ್ತಿ ಮಾಡಿಕೊಳ್ಳುತ್ತೇವೆ ಎಂದರು.
ಇದನ್ನೂ ಓದಿ:-ಪ್ರತಿಭಟನೆ ವೇಳೆ ಮಹಿಳಾ ASIನ ಚಿನ್ನದ ಸರ ಎಗರಿಸಿದ ಖದೀಮರು
ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲು ನಮಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಎಸ್ಸಿಎಸ್ಟಿ ಒಳಮೀಸಲಾತಿ ಜಾರಿ ಮಾಡಿದ ಪರಿಣಾಮ ಕೆಲವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದರು. ನ್ಯಾಯಾಲಯವು ಪ್ರಕರಣ ಇತ್ಯರ್ಥ ಆಗುವವರೆಗೂ ನೇಮಕಾತಿ ಬೇಡ ಎಂದು ಆದೇಶ ಮಾಡಿದೆ. ಅದನ್ನು ಮೀರಿ ನಾವು ಹೇಗೆ ನೇಮಕಾತಿ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಕಲಬುರಗಿ ಜಿಲ್ಲೆಯಲ್ಲಿ ೨೮ ಪೊಲೀಸ್ ಠಾಣೆಗಳಿಗೆ ೧೧೨೫ ಹುದ್ದೆಗಳು ಮಂಜೂರಾಗಿದೆ. ಇದರಲ್ಲಿ ೧೨೬ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ೧೪೬ ಖಾಲಿ ಇವೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನಮ ಸರ್ಕಾರ ಪ್ರತಿ ವರ್ಷ ೫ ಸಾವಿರ ಕೋಟಿ ಅನುದಾನ ನೀಡುತ್ತಿದ್ದೇವೆ. ಇದರಲ್ಲಿ ನಮ ಇಲಾಖೆಗೂ ಅನುದಾನ ನೀಡಬೇಕೆಂದು ಮನವಿ ಮಾಡಿದ್ದೆವು. ೫೦ ಕೋಟಿ ಅನುದಾನ ನೀಡಲು ಸೂಚಿಸಿದ್ದಾರೆ. ಇದರಲ್ಲಿ ಎಲ್ಲೆಲ್ಲಿ ಅಗತ್ಯವಿರುತ್ತದೆಯೋ ಅಂಥ ಕಡೆ ಪೊಲೀಸ್ ಠಾಣೆಗಳು, ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು.
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…