ರಾಜ್ಯ

ನಟ ದರ್ಶನ್‌ ಸೆಲ್‌ ಸುತ್ತಮತ್ತ ಇದ್ದ ನಟೋರಿಯಸ್‌ ರೌಡಿಗಳು ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್‌ ಸೆಲ್‌ ಸುತ್ತಾಮುತ್ತಾ ಇದ್ದ ಆರೋಪಿಗಳನ್ನು ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ.

ಕಳೆದ ಬಾರಿ ಪರಪ್ಪನ ಅಗ್ರಹಾರದಲ್ಲಿ ನಡೆದ ಅವಾಂತರದಿಂದ ಫುಲ್‌ ಅಲರ್ಟ್‌ ಆಗಿರುವ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ನಟ ದರ್ಶನ್‌ ಇಡಲಾಗಿದ್ದ ಸೆಲ್‌ಗೆ ಬಂದೋಬಸ್ತ್‌ ಮಾಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಟ ದರ್ಶನ್‌ ಸೆಲ್‌ ಸುತ್ತಾಮುತ್ತಾ ಇದ್ದ ನಟೋರಿಯಸ್‌ ರೌಡಿಗಳನ್ನು ಶಿಫ್ಟ್‌ ಮಾಡಲಾಗಿದೆ. ದರ್ಶನ್‌ ಸೆಲ್‌ಗೆ ಹೊಂದಿಕೊಂಡಿರುವ ಸೆಲ್‌ಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ.

ಈ ಹಿಂದೆ ರೌಡಿಶೀಟರ್‌ ವಿಲ್ಸನ್‌ ಗಾರ್ಡನ್‌ ನಾಗನ ಜೊತೆ ಹರಟೆ ಹೊಡೆಯುತ್ತಾ ಕುಳಿತಿದ್ದ ನಟ ದರ್ಶನ್‌ ಫೋಟೋ ವೈರಲ್‌ ಆಗಿದ್ದವು. ಈ ಬಗ್ಗೆ ಸುಪ್ರೀಂಕೋರ್ಟ್‌ ಎಚ್ಚರಿಕೆ ಬೆನ್ನಲ್ಲೇ ಪೊಲೀಸರು ನಿಗಾ ವಹಿಸಿದ್ದಾರೆ.

ವಿಲ್ಸನ್‌ ಗಾರ್ಡನ್‌ ನಾಗನ ಜೊತೆ ನಟ ದರ್ಶನ್‌ ಕುಳಿತುಕೊಂಡು ಸಿಗರೇಟು ಹೊಡೆದಿದ್ದ. ಲ್ಯಾನ್‌ನಲ್ಲಿ ಕುಳಿತು ಕಾಫಿ ಕುಡಿದ ಫೋಟೋಗಳು ವೈರಲ್‌ ಆಗಿದ್ದವು. ಈ ಬಗ್ಗೆ ಸುಪ್ರೀಂಕೋರ್ಟ್‌ ಎಚ್ಚರಿಕೆ ನೀಡಿದ ಬೆನ್ನಲ್ಲೇ ಜೈಲಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

2 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

2 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

2 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

3 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

3 hours ago