Darshan
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೆಲ್ ಸುತ್ತಾಮುತ್ತಾ ಇದ್ದ ಆರೋಪಿಗಳನ್ನು ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ.
ಕಳೆದ ಬಾರಿ ಪರಪ್ಪನ ಅಗ್ರಹಾರದಲ್ಲಿ ನಡೆದ ಅವಾಂತರದಿಂದ ಫುಲ್ ಅಲರ್ಟ್ ಆಗಿರುವ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ನಟ ದರ್ಶನ್ ಇಡಲಾಗಿದ್ದ ಸೆಲ್ಗೆ ಬಂದೋಬಸ್ತ್ ಮಾಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಟ ದರ್ಶನ್ ಸೆಲ್ ಸುತ್ತಾಮುತ್ತಾ ಇದ್ದ ನಟೋರಿಯಸ್ ರೌಡಿಗಳನ್ನು ಶಿಫ್ಟ್ ಮಾಡಲಾಗಿದೆ. ದರ್ಶನ್ ಸೆಲ್ಗೆ ಹೊಂದಿಕೊಂಡಿರುವ ಸೆಲ್ಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ.
ಈ ಹಿಂದೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಜೊತೆ ಹರಟೆ ಹೊಡೆಯುತ್ತಾ ಕುಳಿತಿದ್ದ ನಟ ದರ್ಶನ್ ಫೋಟೋ ವೈರಲ್ ಆಗಿದ್ದವು. ಈ ಬಗ್ಗೆ ಸುಪ್ರೀಂಕೋರ್ಟ್ ಎಚ್ಚರಿಕೆ ಬೆನ್ನಲ್ಲೇ ಪೊಲೀಸರು ನಿಗಾ ವಹಿಸಿದ್ದಾರೆ.
ವಿಲ್ಸನ್ ಗಾರ್ಡನ್ ನಾಗನ ಜೊತೆ ನಟ ದರ್ಶನ್ ಕುಳಿತುಕೊಂಡು ಸಿಗರೇಟು ಹೊಡೆದಿದ್ದ. ಲ್ಯಾನ್ನಲ್ಲಿ ಕುಳಿತು ಕಾಫಿ ಕುಡಿದ ಫೋಟೋಗಳು ವೈರಲ್ ಆಗಿದ್ದವು. ಈ ಬಗ್ಗೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಜೈಲಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…