ಮೈಸೂರು: ಬಿಜೆಪಿಯಿಂದ ಆಫರ್ ಬಂದಿತ್ತು. ಡಿಸಿಎಂ ಹುದ್ದೆ ಬೇಕೋ? ಜೈಲುವಾದ ಬೇಕೋ? ಎಂದು ದೆಹಲಿಯಿಂದ ಕರೆ ಮಾಡಿದ್ದರು. ಪಕ್ಷ ನಿಷ್ಠೆಗಾಗಿ ಜೈಲಿಗೆ ಹೋಗಿದ್ದೆ ಎಂದು ಹೇಳಿಕೆ ನೀಡಿರುವ ಡಿಸಿಎಂ ಡಿಕೆಶಿ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಡಿಕೆಶಿ ಅವರನ್ನು ಬಿಜೆಪಿಯಲ್ಲಿ ಯಾರು ಕರೆದರು? ಯಾವಾಗ ಕರೆದರು? ಎಂದು ಪ್ರಶ್ನಿಸಿದರು.
ಇದನ್ನು ಓದಿ: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿ.ಎಂ.ಸಿದ್ದರಾಮಯ್ಯ
ಡಿಕೆಶಿ ಅವರನ್ನು ಬಿಜೆಪಿ ಯಾರು ಕರೆದರು ಎಂಬುದನ್ನು ಬಹಿರಂಗಪಡಿಸಲಿ. ಇಷ್ಟು ದಿನ ಸುಮ್ಮನಿದ್ದ ಡಿಕೆಶಿ ಈಗ ಅಧಿಕಾರ ಹಸ್ತಾಂತರ ಚರ್ಚೆ ಸಂದರ್ಭದಲ್ಲಿ ಈ ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಅವರು ಕಾಂಗ್ರೆಸ್ಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇದೆಲ್ಲಾ ನವೆಂಬರ್ ಕ್ರಾಂತಿಯ ಬದಲಾವಣೆ. ಅಧಿಕಾರ ಹಸ್ತಾಂತರ ಸಮಯ ಬರುತ್ತಿದ್ದಾಗ ಹೇಳಿಕೆ ನೀಡುತ್ತಿದ್ದಾರೆ. ಇದು ಪಕ್ಕಾ ಮೆಸೇಜ್. ಇದು ಧಮ್ಕಿ. ನವೆಂಬರ್ ಕ್ರಾಂತಿ ಶುರುವಾಗುತ್ತದೆ ಎಂದು ಈಗ ಹೇಳುತ್ತಿದ್ದಾರೆ ಎಂದು ಟಾಂಗ್ ನೀಡಿದರು.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…