ರಾಜ್ಯ

ನೃಪತುಂಗ ವಿವಿ ಘಟಿಕೋತ್ಸವದಲ್ಲಿ 792 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ: ಕುಲಪತಿ ಶ್ರೀನಿವಾಸ್ ಎಸ್ ಬಳ್ಳಿ

ಬೆಂಗಳೂರು: 2020ರಲ್ಲಿ ವಿಶ್ವವಿದ್ಯಾಲಯವಾಗಿ ಅಸ್ತಿತ್ವಕ್ಕೆ ಬಂದ ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯವು ಇದೀಗ ತನ್ನ ಪ್ರಥಮ ಘಟಿಕೋತ್ಸವವನ್ನು ಆಗಸ್ಟ್ 21ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ನೃಪತುಂಗ ವಿಶ್ವವಿದ್ಯಾಲಯದ ಕುಲಪತಿಗಳಾದ ಶ್ರೀನಿವಾಸ ಬಳ್ಳಿ ಅವರು ತಿಳಿಸಿದರು.

ಇಂದು (ಆಗಸ್ಟ್ 19) ನೃಪತುಂಗ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಲಪತಿಗಳು, ಘಟಿಕೋತ್ಸವದ ದಿನದಂದು ಸುಮಾರು 792 ವಿದ್ಯಾರ್ಧಿಗಳಿಗೆ ಪದವಿ ಪ್ರಧಾನ ಮಾಡಲಾಗುವುದು. 16 ಟಾರ‍್ಸ್ ವಿದ್ಯಾರ್ಥಿಗಳಿಗೆ ಬಂಗಾರದ ಪದಕ ನೀಡಲಾಗುವುದು. ಹಾಗೂ ಬಾಹ್ಯಾಕಾಶ ವಿಜ್ಞಾನ ಮತ್ತು ಚಂದ್ರಯಾನದಲ್ಲಿ ಅನುಪಮ ಕೊಡುಗೆಗಳನ್ನು ನೀಡಿರುವ ಇಸ್ರೋ ವಿಜ್ಞಾನಿ ಶ್ರೀಮತಿ ನಂದಿನಿ ಹರಿನಾಥ, ಸ್ವಾಮಿ ವಿವೇಕಾನಂದ ಯೂಥ್ ಮೂಮೆಂಟ್ ಡಾ. ರಾಮಸ್ವಾಮಿ ಬಾಲಸುಬ್ರಮಣಿಯನ್ ಮತ್ತು ಇನ್ಫೋಸಿಸ್ ಸಪ್ತ ಸಂಸ್ಥಾಪಕರಲ್ಲಿ ಒಬ್ಬರಾದ ದಿನೇಶ ಕೆ. ಅವರುಗಳಿಗೆ ತಮ್ಮದೇ ಆದ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿಗಳನ್ನು ನೀಡಲಾಗುವುದು ಎಂದು ತಿಳಿಸಿದರು.

2023-24ನೇ ಸಾಲಿನ ಬಿ.ಎಸ್ಸಿ ಸ್ನಾತಕ ಪದವಿ ಪಡೆದ ನೃಪತುಂಗ ವಿಶ್ವವಿದ್ಯಾಲಯದ ಹರ್ಷಿತ ಬಿ.ಕೆ, ಲೋಕೇಶ್ವರಿ ಆರ್, 2020-22ನೇ ಸಾಲಿನ ಎಂಎಸ್ಸಿ ಸೂಕ್ಷ್ಮ ಜೀವಶಾಸ್ತ್ರದ ಸ್ನಾತಕೋತ್ತರ ಪದವಿ ಪಡೆದ ಸೌಮ್ಯ ಮೂರ್ತಿ, ಸಸ್ಯಶಾಸ್ತ್ರದಲ್ಲಿ ಕೃತಿಕ ಓಂಪ್ರಕಾಶ್, ಭೌತಶಾಸ್ತ್ರದಲ್ಲಿ ಕಾವ್ಯ ಎಸ್, ಜೈವಿಕ ತಂತ್ರಜ್ಞಾನದಲ್ಲಿ ದರ್ಶನ್ ಎಲ್, ಗಣಿತ ಶಾಸ್ತ್ರದಲ್ಲಿ ಮೇಘನ ಸಿ, ಪ್ರಾಣಿಶಾಸ್ತ್ರದಲ್ಲಿ ಶ್ರೀನಿಧಿ ಎಂ. ಭಟ್ ಅಲೇಕ್, ರಸಾಯನ ಶಾಸ್ತ್ರದಲ್ಲಿ ಚಂದನ ಎನ್, 2021-23ನೇ ಸಾಲಿನ ಎಂಎಸ್ಸಿ ಸೂಕ್ಷ್ಮ ಜೀವಶಾಸ್ತ್ರದ ಸ್ನಾತಕೋತ್ತರ ಪದವಿ ಪಡೆದ ಆಸಿಯಾ ರೆಹಮಾನ್, ಸಸ್ಯಶಾಸ್ತ್ರದಲ್ಲಿ ಬೆರ್ದಿನಾಪೈರೇಸ್, ಭೌತಶಾಸ್ತ್ರದಲ್ಲಿ ರಾಬರ್ಟ್ಸನ್. ಬಿ, ಜೈವಿಕ ತಂತ್ರಜ್ಞಾನದಲ್ಲಿ ವನಿತಾ ಟಿ, ಗಣಿತಶಾಸ್ತ್ರದಲ್ಲಿ ಹೇಮ ಎಂ, ಪ್ರಾಣಿಶಾಸ್ತ್ರದಲ್ಲಿ ಇಂಚರ ನಾರಾಯಣ ಹಾಗೂ ರಸಾಯನಶಾಸ್ತ್ರದಲ್ಲಿ ಸೃಷ್ಟಿ ಎಂ.ಎಸ್ ಇವರುಗಳಿಗೆ ಬಂಗಾರದ ಪದಕ ಪ್ರದಾನ ಮಾಡಲಾಗುವುದು.

ಘಟಿಕೋತ್ಸವದಲ್ಲಿ 2020-22ರ ಬ್ಯಾಚಿನ 169 ಮತ್ತು 2021-23 ಬ್ಯಾಚಿನ 169 ಹೀಗೆ ಒಟ್ಟು 338 ಸ್ನಾತಕೋತರ ಪದವೀಧರರಿಗೆ ಮತ್ತು 2020-23ರ 454 ಸ್ನಾತಕ ಪದವೀಧರರಿಗೆ ಮೊದಲ ಘಟಿಕೋತ್ಸವದಲ್ಲಿ ಪದವಿ ಪ್ರಧಾನ ಮಾಡಲಾಗುವುದು.

ಇದು ಬಿಎಸ್ಸಿ, ಬಿಸಿಎ ಮತ್ತು ಎಂಎಸ್ಸಿ ವಿಷಯಗಳ ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿ ಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ ಮತ್ತು ಜೈವಿಕ ತಂತ್ರಜ್ಞಾನಗಳ ಪದವೀಧರರನ್ನು ಒಳಗೊಂಡಿದೆ.

ಪದವೀಧರರನ್ನು ಈಗಾಗಲೇ ನೋಂದಾಯಿಸಿಕೊಳ್ಳಲಾಗಿದ್ದು ನೋಂದಾಯಿತ ಪದವೀಧರರು, ಆಹ್ವಾನಿತರಿಗೆ ಮಾತ್ರ ಪ್ರವೇಶದ ಅವಕಾಶವಿದ್ದು, ಕಾರ್ಯಕ್ರಮದ ಮೊದಲ ಘಟಿಕೋತ್ಸವ ಮೆರವಣಿಗೆ ಜ್ಞಾನಜ್ಯೋತಿ ಸಭಾಂಗಣದ ಆವರಣದಲ್ಲಿ ಜರುಗುವುದು.

ಸಮಾರಂಭದ ಅಧ್ಯಕ್ಷತೆಯನ್ನು ನೃಪತುಂಗ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ಕರ್ನಾಟಕ ರಾಜ್ಯ ಸರ್ಕಾರದ ಘನತವತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ವಹಿಸಲಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷರಾದ ಪ್ರೊ. ಎಂ. ಜಗದೀಶ್ ಕುಮಾರ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣವನ್ನು ಮಾಡಲಿದ್ದಾರೆ.

ಕರ್ನಾಟಕ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರು ಮತ್ತು ನೃಪತುಂಗ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳಾದ ಡಾ. ಎಂ. ಸಿ. ಸುಧಾಕರ್ ಉಪಸ್ಥಿತರಿರುತ್ತಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನೃಪತುಂಗ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರಾದ ಶಿವನಂದ ಬ. ಕರಾಳೆ ಮತ್ತು ಮೌಲ್ಯಮಾಪನ ಕುಲಸಚಿವರಾದ ಪ್ರೋ.ಎ.ಸಿ. ಮಂಜುಳ ಅವರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

6 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

6 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

8 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

8 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

9 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

9 hours ago