ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಮಾರು 107 ಸಾಹಿತಿಗಳು, ಬುದ್ಧಿ ಜೀವಿಗಳು ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.
ಪತ್ರದಲ್ಲಿ ವೀರಭದ್ರಪ್ಪ, ಕೆ ನೀಲಾ, ಸೇರಿದಂತೆ ಒಟ್ಟು 107 ಸಾಹಿತಿಗಳ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಸಾಹಿತಿಗಳು ಉಲ್ಲೆಖಿಸಿದ ಪ್ರಮುಖ ಅಂಶಗಳು
1) ಪ್ರಜ್ವಲರನ್ನು ಕೂಡಲೇ ಬಂಧಿಸಿ ಐಟಿ ಐಪಿಸಿ ಕಾಯ್ದೆ ಅಡಿ ಕೆಸ್ ಹಾಕಿ
2) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪ್ರಚಾರಪ ಮಾಡುತ್ತಿರುವ ರಾಜಕಾರಣಿಗಳಿಗೆ ಕಡಿವಾಣ ಹಾಕಿ
3) ಎಸ್ ಐ ಟಿ ಅಧಿಕಾರಿಯ ತನಿಖೆಯು ಕಾಲಮಿತಿಯೊಳಗೆ ಕೊನೆಗೊಳ್ಳಬೇಕು.
4) ಪ್ರಜ್ವಲ್ ಜೊತೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು
5) ಪ್ರಜ್ವಲ್ ಮಾಜಿ ಕಾರು ಚಾಲ ಕಾರ್ತಿಕ ಗೌಡನನ್ನು ಕೂಡಲೇ ಬಂಧಿಸಬೇಕು.
6) ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಗಂಭೀರ ಪ್ರಕರಣ ಹಾಕಬೇಕು.
7) ವಿಡಿಯೋಗಳನ್ನು ಹಂಚಿದವರ ವಿರುದ್ಧ ಕೂಡ ಮೊಕದ್ದಮೆ ಹೂಡಬೇಕು.
8) ಎಲ್ಲಾ ಗೊತ್ತಿದ್ದು ಮಾಹಿತಿ ನೀಡಿದ ಬಿಜೆಪಿ ರಾಜ್ಯ ಹಾಗೂ ರಾಷ್ಟ್ರೀಯ ಅಧ್ಯಕ್ಷರಗಳನ್ನ ಸಂಚಿನ ಭಾಗ ಎಂದು ಪರಿಗಣಿಸಬೇಕು
9) ವಿಡಿಯೋಗಳು ಐದಾರು ವರ್ಷಗಳ ಹಿಂದಿನದು ಎಂದು ರೇವಣ್ಣ ಕುಟುಂಬ ಸದಸ್ಯರ ವಿರುದ್ಧ ಕೆಎಸ್ ಹಾಕಬೇಕು.
ಹೀಗೆ ಸುಮಾರು ಇನ್ನು ಹಲವಾರು ಅಂಶಗಳನ್ನು ಉಲ್ಲೇಖಿಸಿ ಸುಮಾರು 107 ಸಾಹಿತಿಗಳು ಪತ್ರದಲ್ಲಿ ಸಹಿ ಹಾಕುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…