ರಾಜ್ಯ

ಅಶ್ಲೀಲ ವಿಡಿಯೋ ಪ್ರಕರಣ: ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರಿನತ್ತ ಹೊರಟ ಸಂಸದ ಪ್ರಜ್ವಲ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮೆರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಕೊನೆಗೂ ಇಂದು ರಾಜ್ಯದತ್ತ ಪ್ರಯಾಣ ಬೆಳೆಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್‌ನಿಂದ ವಿಮಾನ ಹತ್ತಿದ್ದು, LH764 ವಿಮಾನದಲ್ಲಿ ಬ್ಯುಸಿನೆಸ್‌ ಕ್ಲಾಸ್‌ ಪ್ರಯಾಣಿಕರ ಸೀಟ್‌ನಲ್ಲಿ ಕುಳಿತುಕೊಂಡಿದ್ದಾರೆ. ಇಂದು ಸಂಜೆ 4;30 ಕ್ಕೆ ವಿಮಾನ
ಟೇಕಾಫ್‌ ಆಗಿದೆ. ಮೊದಲಿಗೆ ಲಗೇಜ್‌ ಚೆಕ್‌ಇನ್‌ ಮಾಡಿ, ನಂತರ ಎರಡು ಲಗ್ಗೇಜ್ ಬ್ಯಾಗ್‌ ಸಮೇತ ಇಂದು ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ಗೆ ಮಧ್ಯರಾತ್ರಿ 12;30ಕ್ಕೆ ಆಗಮಿಸಲಿದ್ದಾರೆ.

ಈ ಹಿಂದೆ ಎರಡು ಬಾರಿ ಬರುವುದಾಗಿ ಹೇಳಿ ಕೊನೆ ಸಮಯದಲ್ಲಿ ವಿಮಾನ ಹತ್ತದೆ ಕಣ್ಣಮುಚ್ಚಾಲೆ ಆಟವಾಡುತ್ತಿದ್ದ ಪ್ರಜ್ವಲ್‌ ಕೊನೆಗೆ ಮೇ 31 ರಂದು ಎಸ್‌ಐಟಿ ಮುಂದೆ ಹಾಜರಾಗ್ತಾತೆ ಎಂದು ವಿಡಿಯೋ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಜರ್ಮನಿಯಿಂದ ಬೆಂಗಳೂರಿಗೆ ಬರಲು ಟಿಕೆಟ್‌ ಬುಕ್‌ ಮಾಡಲಾಗಿತ್ತು. ಲುಫ್ತಾರ್‌ ಏರ್‌ಲೈನ್ಸ್‌ ವಿಮಾನದಲ್ಲಿ ಬ್ಯುಸಿನೆಸ್‌ ಕ್ಲಾಸ್‌ ಸೀಟಿನಲ್ಲಿ ಬೆಂಗಳೂರಿನತ್ತ ಹೊರಟಿದ್ದಾರೆ.

ಇನ್ನೂ ಪ್ರಜ್ವಲ್‌ ಅರೆಸ್ಟ್‌ ಆಗುವುದು ಕನ್ಫರ್ಮ್‌ ಆಗುತ್ತಿದ್ದಂತೆ ವಿದೇಶದಲ್ಲಿದ್ದುಕೊಂಡೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಅರ್ಜಿಯನ್ನು ಮೇ.  31 ಕ್ಕೆ ಮುಂದೂಡಿ ಆದೇಶ ಹೊರಡಿಸಿತ್ತು. ಈ ಮೂಲಕ ಪ್ರಜ್ವಲ್‌ ಬಂಧನ ಫಿಕ್ಸ್‌ ಆಗಿದ್ದು, ಎಸ್‌ಐಟಿ ತಂಡ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಬೀಡು ಬಿಟ್ಟಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

56 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

1 hour ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

1 hour ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

1 hour ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

10 hours ago