ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಕೇಂದ್ರ ವಿದೇಶಾಂಗ ಸಚಿವಾಲಯ ಬಿಗ್ ಶಾಕ್ ನೀಡಿದೆ.
ಕೇಂದ್ರ ವಿದೇಶಾಂಗ ಸಚಿವಾಲಯ ಇದೇ ಮೊದಲ ಬಾರಿಗೆ ವಿದೇಶದಲ್ಲಿರುವ ಪ್ರಜ್ವಲ್ಗೆ ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಕಾರಣ ಕೇಳಿ ಇಂದು (ಮೇ.24) ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೊರ್ಟ್ ಮತ್ತು ವೀಸಾ ಎರಡನ್ನೂ ರದ್ದುಪಡಿಸಬೇಕೆಂದು ಸಿಎಂ ಸಿದ್ದರಾಮಯ್ಯ ಎರಡು ಬಾರಿ ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಇಲಾಖೆ ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ನೀಡಿ, ಹತ್ತು ದಿನಗಳೊಳಗೆ ನೀವು ಶೋಕಾಸ್ ನೋಟಿಸ್ಗೆ ಉತ್ತರ ನೀಡದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದೆ.
ನೀವು ಶೋಕಾಸ್ ನೋಟಿಸ್ಗೆ ಸರಿಯಾದ ಉತ್ತರ ಕೊಡದಿದ್ದರೆ ನಿಮ್ಮ ಪ್ರಯಾಣದ ಮೇಲೆ ನಿರ್ಬಂಧ ಹಾಕಬೇಕಾಗುತ್ತದೆ. ಮುಂದಿನ ಕಾನೂನಿನ ಬಿಕ್ಕಟ್ಟುಗಳಿಗೆ ನೀವೇ ಹೊಣೆಯಾಗುತ್ತೀರಿ ಎಂದು ಸೂಚನೆ ಕೊಡಲಾಗಿದೆ. ಇದರಿಂದ ವಿದೇಶದಲ್ಲಿರುವ ಪ್ರಜ್ವಲ್ಗೆ ಮತ್ತಷ್ಟು ಸಂಕಷ್ಟ ಎದುರಾದಂತಗಿದೆ.
ವಿದೇಶಾಂಗ ವ್ಯವಹಾರಗಳ ಪಾಸ್ಪೋರ್ಟ್ ರದ್ದುಗೊಂಡರೆ ವಿಧಿ ಇಲ್ಲದೆ ಪ್ರಜ್ವಲ್ ಶರಣಾಗಬೇಕು ಇಲ್ಲವೇ ತನಿಖಾ ಸಂಸ್ಥೆಗಳ ಮೂಲಕ ಬಂಧನಕ್ಕೊಳಗಾಗಬೇಕಿದೆ.
ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಈಗಾಗಲೇ ಪ್ರಜ್ವಲ್ಗೆ ಮೂರು ಬಾರಿ ನೋಟಿಸ್ ಜಾರಿ ಮಾಡಿತ್ತು. ಜರ್ಮನಿಯಿಂದ ಬೆಂಗಳೂರಿಗೆ ಬರಲು ಮೂರು ಬಾರಿ ವಿಮಾನ ಟಿಕೆಟ್ ಬುಕ್ ಮಾಡಿ ಕೊನೆಕ್ಷಣದಲ್ಲಿ ಪ್ರಯಾಣ ರದ್ದುಪಡಿಸಿ ಎಸ್ಐಟಿಗೆ ತಲೆನೋವು ತಂದಿದ್ದರು. ಇದೀಗ ತನಿಖೆಗೆ ಗೈರು ಹಾಜರಾದ ಹಿನ್ನಲೆಯಲ್ಲಿ ಕಾನೂನು ಕ್ರಮದ ಮೂಲಕವೇ ಕ್ರಮ ಕೈಗೊಳ್ಳಲು ಎಸ್ಐಟಿ ಮುಂದಾಗಿದೆ.
ನಂಜನಗೂಡು: ದಿನಾಂಕ 7-3-26 ರಂದು ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲೆ 46 ಬೃಹತ್ ಮರಗಳನ್ನು…
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಐದು ದಿನಗಳ ಕಾಲ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಅಮೇರಿಕಾ ಅಧ್ಯಕ್ಷ ಟ್ರಂಪ್…
ಬೆಂಗಳೂರು: ಇಸ್ರೇಲ್-ಇರಾನ್ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಚಿನ್ನ ಮತ್ತು ಬೆಳ್ಳಿ ದರಗಳ ಸತತ ಕುಸಿತ ಮುಂದುವರೆದಿದೆ. ಇಂದೂ ಕೂಡ ಚಿನ್ನ,…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳ ಸ್ಥಿತಿ ಚಿಂತಾಜನಕವಾಗಿದೆ. ಯುದ್ಧದಿಂದ ಭಾರತದ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ…
ಟೆಹರಾನ್: ಯುದ್ಧದ ಖರ್ಚು ನಿಭಾಯಿಸಲು ಸಂಚಾರ ಮಾಡುವ ವ್ಯಾಪಾರಿ ಹಡಗುಗಳಿಗೆ ಶುಲ್ಕ ವಿಧಿಸಲು ಇರಾನ್ ನಿರ್ಧರಿಸಿದೆ. ಹಾರ್ಮುಜ್ ಜಲಸಂಧಿ ಮೂಲಕ…
ಚಾಮರಾಜನಗರ: ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ…