ರಾಜ್ಯ

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದು ಪ್ರಕ್ರಿಯೆ ಶುರು

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣಗೆ ಕೇಂದ್ರ ವಿದೇಶಾಂಗ ಸಚಿವಾಲಯ ಬಿಗ್‌ ಶಾಕ್‌ ನೀಡಿದೆ.

ಕೇಂದ್ರ ವಿದೇಶಾಂಗ ಸಚಿವಾಲಯ ಇದೇ ಮೊದಲ ಬಾರಿಗೆ ವಿದೇಶದಲ್ಲಿರುವ ಪ್ರಜ್ವಲ್‌ಗೆ ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಕಾರಣ ಕೇಳಿ ಇಂದು (ಮೇ.24) ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‍ಪೊರ್ಟ್ ಮತ್ತು ವೀಸಾ ಎರಡನ್ನೂ ರದ್ದುಪಡಿಸಬೇಕೆಂದು‌ ಸಿಎಂ ಸಿದ್ದರಾಮಯ್ಯ ಎರಡು ಬಾರಿ ಕೇಂದ್ರ  ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಇಲಾಖೆ ಪ್ರಜ್ವಲ್‌ ಗೆ ಶೋಕಾಸ್ ನೋಟಿಸ್ ನೀಡಿ,‌ ಹತ್ತು ದಿನಗಳೊಳಗೆ ನೀವು ಶೋಕಾಸ್ ನೋಟಿಸ್‍ಗೆ ಉತ್ತರ ನೀಡದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದೆ.

ನೀವು ಶೋಕಾಸ್ ನೋಟಿಸ್‍ಗೆ ಸರಿಯಾದ ಉತ್ತರ ಕೊಡದಿದ್ದರೆ ನಿಮ್ಮ ಪ್ರಯಾಣದ ಮೇಲೆ ನಿರ್ಬಂಧ ಹಾಕಬೇಕಾಗುತ್ತದೆ. ಮುಂದಿನ ಕಾನೂನಿನ ಬಿಕ್ಕಟ್ಟುಗಳಿಗೆ ನೀವೇ ಹೊಣೆಯಾಗುತ್ತೀರಿ ಎಂದು ಸೂಚನೆ ಕೊಡಲಾಗಿದೆ. ಇದರಿಂದ ವಿದೇಶದಲ್ಲಿರುವ ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಎದುರಾದಂತಗಿದೆ.

ವಿದೇಶಾಂಗ ವ್ಯವಹಾರಗಳ ಪಾಸ್‍ಪೋರ್ಟ್ ರದ್ದುಗೊಂಡರೆ ವಿಧಿ ಇಲ್ಲದೆ‌ ಪ್ರಜ್ವಲ್ ಶರಣಾಗಬೇಕು ಇಲ್ಲವೇ ತನಿಖಾ ಸಂಸ್ಥೆಗಳ ಮೂಲಕ ಬಂಧನಕ್ಕೊಳಗಾಗಬೇಕಿದೆ.

ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ಈಗಾಗಲೇ ಪ್ರಜ್ವಲ್‌ಗೆ ಮೂರು ಬಾರಿ ನೋಟಿಸ್ ಜಾರಿ ಮಾಡಿತ್ತು. ಜರ್ಮನಿಯಿಂದ ಬೆಂಗಳೂರಿಗೆ ಬರಲು ಮೂರು ಬಾರಿ ವಿಮಾನ ಟಿಕೆಟ್‌ ಬುಕ್‌ ಮಾಡಿ ಕೊನೆಕ್ಷಣದಲ್ಲಿ ಪ್ರಯಾಣ ರದ್ದುಪಡಿಸಿ ಎಸ್‌ಐಟಿಗೆ ತಲೆನೋವು ತಂದಿದ್ದರು. ಇದೀಗ ತನಿಖೆಗೆ ಗೈರು ಹಾಜರಾದ ಹಿನ್ನಲೆಯಲ್ಲಿ ಕಾನೂನು ಕ್ರಮದ ಮೂಲಕವೇ ಕ್ರಮ ಕೈಗೊಳ್ಳಲು ಎಸ್‌ಐಟಿ ಮುಂದಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

23 mins ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

28 mins ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

33 mins ago

ಮಳೆ ಅನಾಹುತ ಎದುರಿಸಲು ಮೈಸೂರು ನಗರಪಾಲಿಕೆ ಸಿದ್ಧತೆ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ.…

36 mins ago

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

9 hours ago