ಚಿಕ್ಕಮಗಳೂರು: ದೇವಿರಮ್ಮನ ಬೆಟ್ಟದಲ್ಲಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಮೈಸೂರು ಅರಸರ ಮನೆತನದಿಂದ ದೇವಿಗೆ ಬಾಗಿನ ಅರ್ಪಣೆ ಮಾಡಲಾಯಿತು.
ಮೈಸೂರು ಸಂಸ್ಥಾನದ ಪರವಾಗಿ ಆಗಮಿಸಿದ ಅರಸು ಸಂಘದ ರಾಜ್ಯಾಧ್ಯಕ್ಷ ದಿನೇಶ್ ತಂಡಕ್ಕೆ ದೇವಾಲಯದ ಆಡಳಿತ ಮಂಡಳಿ ಸ್ವಾಗತ ನೀಡಿತು. ಬಳಿಕ ಹಣ್ಣು, ಕಾಯಿ, ವೀಳ್ಯದೆಲೆ, ಸೀರೆ, ಅರಿಶಿನ-ಕುಂಕುಮ ಅರ್ಪಣೆ ಮಾಡಲಾಯಿತು.
ಇನ್ನು ದೇವಿರಮ್ಮನ ಬೆಟ್ಟದ ತಪ್ಪಲಿನ ಕೆಳಭಾಗದಲ್ಲಿರುವ ದೇವಸ್ಥಾನಕ್ಕೆ ಗಾಳಿ ರೂಪದಲ್ಲಿ ದೇವಿರಮ್ಮ ಪ್ರವೇಶಿಸಿದ್ದಾಳೆ. ವರ್ಷಕ್ಕೊಮ್ಮೆ ಬೆಟ್ಟದ ಮೇಲೆ ಭಕ್ತರಿಗೆ ದರ್ಶನ ನೀಡುವ ದೇವೀರಮ್ಮ ಉಳಿದ 364 ದಿನ ದೇವಸ್ಥಾನದಲ್ಲಿ ಭಕ್ತರಿಗೆ ದರ್ಶನ ನೀಡುತ್ತಾಳೆ.
ಈ ಬಾರಿ ಎರಡು ದಿನ ಬೆಟ್ಟ ಹತ್ತಲು ಅವಕಾಶ ನೀಡಲಾಗಿತ್ತು. ಎರಡು ದಿನದಲ್ಲಿ ಸುಮಾರು 70 ಸಾವಿರಕ್ಕೂ ಅಧಿಕ ಭಕ್ತರು ಬರೀಗಾಲಿನಲ್ಲಿ ಬೆಟ್ಟವನ್ನು ಏರಿ ದೇವಿರಮ್ಮ ತಾಯಿಯ ದರ್ಶನ ಪಡೆದು ಪುನೀತರಾದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…