ಚಿಕ್ಕಮಗಳೂರು: ದೇವಿರಮ್ಮನ ಬೆಟ್ಟದಲ್ಲಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಮೈಸೂರು ಅರಸರ ಮನೆತನದಿಂದ ದೇವಿಗೆ ಬಾಗಿನ ಅರ್ಪಣೆ ಮಾಡಲಾಯಿತು.
ಮೈಸೂರು ಸಂಸ್ಥಾನದ ಪರವಾಗಿ ಆಗಮಿಸಿದ ಅರಸು ಸಂಘದ ರಾಜ್ಯಾಧ್ಯಕ್ಷ ದಿನೇಶ್ ತಂಡಕ್ಕೆ ದೇವಾಲಯದ ಆಡಳಿತ ಮಂಡಳಿ ಸ್ವಾಗತ ನೀಡಿತು. ಬಳಿಕ ಹಣ್ಣು, ಕಾಯಿ, ವೀಳ್ಯದೆಲೆ, ಸೀರೆ, ಅರಿಶಿನ-ಕುಂಕುಮ ಅರ್ಪಣೆ ಮಾಡಲಾಯಿತು.
ಇನ್ನು ದೇವಿರಮ್ಮನ ಬೆಟ್ಟದ ತಪ್ಪಲಿನ ಕೆಳಭಾಗದಲ್ಲಿರುವ ದೇವಸ್ಥಾನಕ್ಕೆ ಗಾಳಿ ರೂಪದಲ್ಲಿ ದೇವಿರಮ್ಮ ಪ್ರವೇಶಿಸಿದ್ದಾಳೆ. ವರ್ಷಕ್ಕೊಮ್ಮೆ ಬೆಟ್ಟದ ಮೇಲೆ ಭಕ್ತರಿಗೆ ದರ್ಶನ ನೀಡುವ ದೇವೀರಮ್ಮ ಉಳಿದ 364 ದಿನ ದೇವಸ್ಥಾನದಲ್ಲಿ ಭಕ್ತರಿಗೆ ದರ್ಶನ ನೀಡುತ್ತಾಳೆ.
ಈ ಬಾರಿ ಎರಡು ದಿನ ಬೆಟ್ಟ ಹತ್ತಲು ಅವಕಾಶ ನೀಡಲಾಗಿತ್ತು. ಎರಡು ದಿನದಲ್ಲಿ ಸುಮಾರು 70 ಸಾವಿರಕ್ಕೂ ಅಧಿಕ ಭಕ್ತರು ಬರೀಗಾಲಿನಲ್ಲಿ ಬೆಟ್ಟವನ್ನು ಏರಿ ದೇವಿರಮ್ಮ ತಾಯಿಯ ದರ್ಶನ ಪಡೆದು ಪುನೀತರಾದರು.
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…