ರಾಜ್ಯ

ದೇವಿರಮ್ಮನಿಗೆ ಮೈಸೂರು ಅರಸರ ಮನೆತನದಿಂದ ಬಾಗಿನ ಅರ್ಪಣೆ

ಚಿಕ್ಕಮಗಳೂರು: ದೇವಿರಮ್ಮನ ಬೆಟ್ಟದಲ್ಲಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಮೈಸೂರು ಅರಸರ ಮನೆತನದಿಂದ ದೇವಿಗೆ ಬಾಗಿನ ಅರ್ಪಣೆ ಮಾಡಲಾಯಿತು.

ಮೈಸೂರು ಸಂಸ್ಥಾನದ ಪರವಾಗಿ ಆಗಮಿಸಿದ ಅರಸು ಸಂಘದ ರಾಜ್ಯಾಧ್ಯಕ್ಷ ದಿನೇಶ್‌ ತಂಡಕ್ಕೆ ದೇವಾಲಯದ ಆಡಳಿತ ಮಂಡಳಿ ಸ್ವಾಗತ ನೀಡಿತು. ಬಳಿಕ ಹಣ್ಣು, ಕಾಯಿ, ವೀಳ್ಯದೆಲೆ, ಸೀರೆ, ಅರಿಶಿನ-ಕುಂಕುಮ ಅರ್ಪಣೆ ಮಾಡಲಾಯಿತು.

ಇನ್ನು ದೇವಿರಮ್ಮನ ಬೆಟ್ಟದ ತಪ್ಪಲಿನ ಕೆಳಭಾಗದಲ್ಲಿರುವ ದೇವಸ್ಥಾನಕ್ಕೆ ಗಾಳಿ ರೂಪದಲ್ಲಿ ದೇವಿರಮ್ಮ ಪ್ರವೇಶಿಸಿದ್ದಾಳೆ. ವರ್ಷಕ್ಕೊಮ್ಮೆ ಬೆಟ್ಟದ ಮೇಲೆ ಭಕ್ತರಿಗೆ ದರ್ಶನ ನೀಡುವ ದೇವೀರಮ್ಮ ಉಳಿದ 364 ದಿನ ದೇವಸ್ಥಾನದಲ್ಲಿ ಭಕ್ತರಿಗೆ ದರ್ಶನ ನೀಡುತ್ತಾಳೆ.

ಈ ಬಾರಿ ಎರಡು ದಿನ ಬೆಟ್ಟ ಹತ್ತಲು ಅವಕಾಶ ನೀಡಲಾಗಿತ್ತು. ಎರಡು ದಿನದಲ್ಲಿ ಸುಮಾರು 70 ಸಾವಿರಕ್ಕೂ ಅಧಿಕ ಭಕ್ತರು ಬರೀಗಾಲಿನಲ್ಲಿ ಬೆಟ್ಟವನ್ನು ಏರಿ ದೇವಿರಮ್ಮ ತಾಯಿಯ ದರ್ಶನ ಪಡೆದು ಪುನೀತರಾದರು.

ಆಂದೋಲನ ಡೆಸ್ಕ್

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

4 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

4 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

5 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

5 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

6 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

8 hours ago