Dharmasthala dead bodies burried case
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ, ಚರಂಡಿ ನಿರ್ಮಾಣ ಮಾಡಿದ್ದರೆ ಜನರು ಉದ್ಧಾರ ಆಗ್ತಾರಾ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಯಿಂದ ಜನರ ಜೀವನ ಉದ್ಧಾರ ಆಗಿದೆ. ಆದರೆ, ಬರೀ ರಸ್ತೆ, ಚರಂಡಿಗಳನ್ನೇ ಮಾಡ್ತಾ ಇದ್ದರೆ ಜನರು ಉದ್ಧಾರ ಆಗ್ತಾರಾ ಎಂದು ಕೇಳಿದ್ದಾರೆ. ಯಾರು ಗ್ಯಾರಂಟಿ ಕಾರ್ಯಕ್ರಮವನ್ನು ಟೀಕೆ ಮಾಡುತ್ತಾರೆ. ಈ ಕಾರ್ಯಕ್ರಮ ಯಾರು ಒಪ್ಪೋದಿಲ್ಲವೋ ಅವರಿಗೆ ಒಂದು ಪ್ರಶ್ನೆ. ಈ ಜನ ಏನಾಗಬೇಕು? ಆಯ್ತಪ್ಪ ನಾವು ಗ್ಯಾರಂಟಿ ಕೊಡೋದಿಲ್ಲ. ನಾಳೆಯಿಂದ ನಿಲ್ಸಿ ಬಿಡೋಣ. ಈ 58 ಸಾವಿರ ಕೋಟಿ ರೂ. ಏನು ನಾವು ಕೊಡ್ತಾ ಇದ್ದೀವಿ, ನಾಳೆ ನಿಲ್ಲಿಸ್ತೀವಿ. ಆದರೆ, ನೀವು ರಸ್ತೆ ಮಾಡೋದ್ರಿಂದ, ಚರಂಡಿ ಮಾಡೋದ್ರಿಂದ ಅಥವಾ ಇನ್ನೇನೊ ಕಾರ್ಯಕ್ರಮ ಮಾಡೋದ್ರಿಂದ ಆ ಬಡವರ ಜೀವನ ಏನಾಗುತ್ತದೆ? ಉದ್ಧಾರ ಆಗುತ್ತದಾ ಎಂದು ಪ್ರಶ್ನೆ ಮಾಡಿದ್ದಾರೆ. ಭೌತಿಕ ಸೌಲಭ್ಯಕ್ಕಿಂತ ಜನರ ಜೀವನಕ್ಕೆ ಬೇಕಾದ ಕಾರ್ಯಕ್ರಮ ಕೊಡಬೇಕು ಎಂದು ಪ್ರಸ್ತಾಪಿಸಿದರು.
ಇದನ್ನೂ ಓದಿ:-ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ
ಹಾಗಂತ ನಾವು ರಸ್ತೆ ಮಾಡೋದನ್ನು ನಿಲ್ಲಿಸಿಲ್ಲ. ಮನೆಗಳನ್ನು ಕಟ್ಟೋದನ್ನು ನಿಲ್ಲಿಸಿಲ್ಲ. ಯಾವ ಕಾರ್ಯಕ್ರಮವನ್ನೂ ನಿಲ್ಲಿಸಿಲ್ಲ. ಕೆಲಸ ಮಾಡಲು ಒಂದಿಷ್ಟು ನಿಧಾನ ಆಗಿರಬಹುದು ಎಂದು ಒಪ್ಪಿಕೊಂಡರು. ಆದರೆ, ಬಹಳ ಮುಖ್ಯವಾಗಿ ಮನುಷ್ಯನ ಜೀವನ ಸಾವಿರಾರು ವರ್ಷದ ಶೋಷಣೆ, ಅದು ಮುಂದುವರಿಯಬಾರದು ಅನ್ನೋದೆ ನಮ್ಮೆಲ್ಲರ ಉದ್ದೇಶ. ಅದಕ್ಕಾಗಿ ಗ್ಯಾರಂಟಿ ಕೊಡುತ್ತೇವೆ ಎಂದು ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲ…
ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್ ಜೊತೆ ಮಾತನಾಡುವೆ ಎಂದು ಡಿಸಿಎಂ…
ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…
ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…