ರಾಜ್ಯ

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ, ಚರಂಡಿ ನಿರ್ಮಾಣ ಮಾಡಿದ್ದರೆ ಜನರು ಉದ್ಧಾರ ಆಗ್ತಾರಾ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,‌ ಗ್ಯಾರಂಟಿ ಯೋಜನೆಯಿಂದ ಜನರ ಜೀವನ ಉದ್ಧಾರ ಆಗಿದೆ. ಆದರೆ, ಬರೀ ರಸ್ತೆ, ಚರಂಡಿಗಳನ್ನೇ ಮಾಡ್ತಾ ಇದ್ದರೆ ಜನರು ಉದ್ಧಾರ ಆಗ್ತಾರಾ ಎಂದು ಕೇಳಿದ್ದಾರೆ. ಯಾರು ಗ್ಯಾರಂಟಿ ಕಾರ್ಯಕ್ರಮವನ್ನು ಟೀಕೆ ಮಾಡುತ್ತಾರೆ. ಈ ಕಾರ್ಯಕ್ರಮ ಯಾರು ಒಪ್ಪೋದಿಲ್ಲವೋ ಅವರಿಗೆ ಒಂದು ಪ್ರಶ್ನೆ. ಈ ಜನ ಏನಾಗಬೇಕು? ಆಯ್ತಪ್ಪ ನಾವು ಗ್ಯಾರಂಟಿ ಕೊಡೋದಿಲ್ಲ. ನಾಳೆಯಿಂದ ನಿಲ್ಸಿ ಬಿಡೋಣ. ಈ 58 ಸಾವಿರ ಕೋಟಿ ರೂ. ಏನು ನಾವು ಕೊಡ್ತಾ ಇದ್ದೀವಿ, ನಾಳೆ ನಿಲ್ಲಿಸ್ತೀವಿ. ಆದರೆ, ನೀವು ರಸ್ತೆ ಮಾಡೋದ್ರಿಂದ, ಚರಂಡಿ ಮಾಡೋದ್ರಿಂದ ಅಥವಾ ಇನ್ನೇನೊ ಕಾರ್ಯಕ್ರಮ ಮಾಡೋದ್ರಿಂದ ಆ ಬಡವರ ಜೀವನ ಏನಾಗುತ್ತದೆ? ಉದ್ಧಾರ ಆಗುತ್ತದಾ ಎಂದು ಪ್ರಶ್ನೆ ಮಾಡಿದ್ದಾರೆ. ಭೌತಿಕ ಸೌಲಭ್ಯಕ್ಕಿಂತ ಜನರ ಜೀವನಕ್ಕೆ ಬೇಕಾದ ಕಾರ್ಯಕ್ರಮ ಕೊಡಬೇಕು ಎಂದು ಪ್ರಸ್ತಾಪಿಸಿದರು.

ಇದನ್ನೂ ಓದಿ:-ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹಾಗಂತ ನಾವು ರಸ್ತೆ ಮಾಡೋದನ್ನು ನಿಲ್ಲಿಸಿಲ್ಲ. ಮನೆಗಳನ್ನು ಕಟ್ಟೋದನ್ನು ನಿಲ್ಲಿಸಿಲ್ಲ. ಯಾವ ಕಾರ್ಯಕ್ರಮವನ್ನೂ ನಿಲ್ಲಿಸಿಲ್ಲ. ಕೆಲಸ ಮಾಡಲು ಒಂದಿಷ್ಟು ನಿಧಾನ ಆಗಿರಬಹುದು ಎಂದು ಒಪ್ಪಿಕೊಂಡರು. ಆದರೆ, ಬಹಳ ಮುಖ್ಯವಾಗಿ ಮನುಷ್ಯನ ಜೀವನ ಸಾವಿರಾರು ವರ್ಷದ ಶೋಷಣೆ, ಅದು ಮುಂದುವರಿಯಬಾರದು ಅನ್ನೋದೆ ನಮ್ಮೆಲ್ಲರ ಉದ್ದೇಶ. ಅದಕ್ಕಾಗಿ ಗ್ಯಾರಂಟಿ ಕೊಡುತ್ತೇವೆ ಎಂದು ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

9 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

9 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

9 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

9 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

9 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

10 hours ago